<p><strong>ಅಳ್ನಾವರ</strong>: ‘ಯುವ ಜನರು ಕ್ರೀಡೆಗಳಲ್ಲಿ ಭಾಗಿಯಾಗುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚಳವಾಗುತ್ತದೆ ಹಾಗೂ ಮಾನಸಿಕ ಬೆಳವಣಿಗೆ ಸದೃಢವಾಗುತ್ತದೆ’ ಎಂದು ಲಾಡ್ ಅವರ ಆಪ್ತ ಕಾರ್ಯದರ್ಶಿ ಶ್ರೀಕಾಂತ ಗಾಯಕವಾಡ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಚಿವ ಸಂತೋಷ್ ಲಾಡ್ ಅವರ ಪ್ರಾಯೋಜಕತ್ವದ ಮೂರು ದಿನದ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿನಾಯಕ ಕುರುಬರ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಧು ಬಡಸ್ಕರ್, ಪರಶುರಾಮ ಬೆಕನೇಕರ, ಹಸನಅಲಿ ಶೇಖ, ಪಿಎಸ್ಐ ಬಸವರಾಜ ಯದ್ದಲಗುಡ್ಡ, ಬಳಿರಾಮ ಅಳವಣಿ, ಸತ್ತಾರ ಬಾತಖಂಡಿ ಇದ್ದರು.</p>.<p>ಕ್ರೀಡಾಕೂಟದ ನಿರ್ಣಾಯಕರಾಗಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಎಸ್.ಎಫ್.ಸೋಜ್, ಮಂಜು ಪಾಟೀಲ, ಪುಂಡಲಿಕ ಪಾರ್ದಿ, ಬಿ.ಕೆ.ಸೌದಾಗರ, ಆನಂದ ಪಾಟೀಲ, ಪ್ರವೀಣ ನಾಯಕ, ಸುನೀಲ ಸಾಗರೇಕರ ಕಾರ್ಯ ನಿರ್ವಹಿಸಿದರು.</p>.<p>ಪ್ರಥಮ ₹ 35 ಸಾವಿರ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ₹ 25 ಸಾವಿರ ಮತ್ತು ಎಲ್ಲ ತಂಡದವರಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಉತ್ತಮ ಆಟ ಪ್ರದರ್ಶಿಸಿದ ಆಟಗಾರರಿಗೆ ವೈಯಕ್ತಿಕ ಬಹುಮಾನ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1151737937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ</strong>: ‘ಯುವ ಜನರು ಕ್ರೀಡೆಗಳಲ್ಲಿ ಭಾಗಿಯಾಗುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚಳವಾಗುತ್ತದೆ ಹಾಗೂ ಮಾನಸಿಕ ಬೆಳವಣಿಗೆ ಸದೃಢವಾಗುತ್ತದೆ’ ಎಂದು ಲಾಡ್ ಅವರ ಆಪ್ತ ಕಾರ್ಯದರ್ಶಿ ಶ್ರೀಕಾಂತ ಗಾಯಕವಾಡ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಚಿವ ಸಂತೋಷ್ ಲಾಡ್ ಅವರ ಪ್ರಾಯೋಜಕತ್ವದ ಮೂರು ದಿನದ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಪಂಚ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ವಿನಾಯಕ ಕುರುಬರ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಧು ಬಡಸ್ಕರ್, ಪರಶುರಾಮ ಬೆಕನೇಕರ, ಹಸನಅಲಿ ಶೇಖ, ಪಿಎಸ್ಐ ಬಸವರಾಜ ಯದ್ದಲಗುಡ್ಡ, ಬಳಿರಾಮ ಅಳವಣಿ, ಸತ್ತಾರ ಬಾತಖಂಡಿ ಇದ್ದರು.</p>.<p>ಕ್ರೀಡಾಕೂಟದ ನಿರ್ಣಾಯಕರಾಗಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಎಸ್.ಎಫ್.ಸೋಜ್, ಮಂಜು ಪಾಟೀಲ, ಪುಂಡಲಿಕ ಪಾರ್ದಿ, ಬಿ.ಕೆ.ಸೌದಾಗರ, ಆನಂದ ಪಾಟೀಲ, ಪ್ರವೀಣ ನಾಯಕ, ಸುನೀಲ ಸಾಗರೇಕರ ಕಾರ್ಯ ನಿರ್ವಹಿಸಿದರು.</p>.<p>ಪ್ರಥಮ ₹ 35 ಸಾವಿರ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ₹ 25 ಸಾವಿರ ಮತ್ತು ಎಲ್ಲ ತಂಡದವರಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಉತ್ತಮ ಆಟ ಪ್ರದರ್ಶಿಸಿದ ಆಟಗಾರರಿಗೆ ವೈಯಕ್ತಿಕ ಬಹುಮಾನ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1151737937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>