ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಅನಾಹುತ

Last Updated 8 ಜನವರಿ 2022, 14:39 IST
ಅಕ್ಷರ ಗಾತ್ರ

ಅಳ್ನಾವರ: ಇಲ್ಲಿನ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಬೆಳಗಾವಿ ಕಡೆಗೆ ಹೊರಟ್ಟಿದ್ದ ಸರಕು ಸಾಗಣೆ ರೈಲು ಹಳಿತಪ್ಪಿದ್ದು, 300 ಮೀಟರ್ ವರೆಗಿನ ರೈಲು ಮಾರ್ಗ ಕಿತ್ತು ಹೋಗಿದೆ.

ರೈಲು ನಿಲ್ದಾಣದಲ್ಲಿ ಒಟ್ಟು ಆರು ಮಾರ್ಗಗಳಿವೆ. ಕೊನೆಯ ಮಾರ್ಗ ಗೂಡ್ಸ್ ರೈಲುಗಳ ಸಂಚಾರಕ್ಕೆ ಮೀಸಲಾಗಿದೆ. ಇಲ್ಲಿನ ನಿಲ್ದಾಣದಿಂದ ರೈಲು ಹೊರಡುತ್ತಿದ್ದಂತೆ ಭಾರಿ ಸದ್ದು ಉಂಟಾಯಿತು, ಹಳಿಯ ಮಾರ್ಗದಲ್ಲಿ ದೂಳು ಎದ್ದಿತ್ತು. ಸಕಾಲದಲ್ಲಿ ರೈಲು ನಿಲುಗಡೆ ಮಾಡಿದ್ದರಿಂದ ಯಾವುದೇ ಅನಾಹುತ ಆಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ಕಾರ್ಮಿಕರು ಸಂಜೆಯವರೆಗೂ ಕಿತ್ತು ಹೋದ ಮಾರ್ಗದ ದುರಸ್ತಿಯಲ್ಲಿ ತೊಡಗಿದ್ದರು. ಕ್ರೇನ್ ಬಳಸಿ ಹೊಸ ಸ್ಲೀ‍ಪರ್‌ಗಳನ್ನು ಅಳವಡಿಸಲಾಯಿತು.

ನಿಲ್ದಾಣದ ಕೊನೆಯ ಮಾರ್ಗದಲ್ಲಿ ನಾಹುತ ಸಂಭವಿಸಿದ್ದರಿಂದ ಪ್ರಯಾಣಿಕರ ರೈಲುಗಳು ಓಡಾಟಕ್ಕೆ ಯಾವುದೇ ತೊಂದರೆ ಆಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT