ಗುರೂಜಿ ಹತ್ಯೆ ಪ್ರಕರಣ: ಹೋಟೆಲ್ ಸಿಬ್ಬಂದಿ ವಿರುದ್ಧ ಎಡಿಜಿಪಿ ಅಲೋಕ್ ಕುಮಾರ್ ಗರಂ

ಹುಬ್ಬಳ್ಳಿ: ನಗರದಲ್ಲಿ ನಡೆದ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೋಟೆಲ್ ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದರು. ಉದ್ಯಮಿಗಳು ಸೇರಿದಂತೆ ದೊಡ್ಡ ದೊಡ್ಡ ವ್ಯಕ್ತಿಗಳು ಭೇಟಿ ನೀಡುವ ಹೋಟೆಲ್ನ ಪ್ರವೇಶದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ವ್ಯವಸ್ಥೆ ಹಾಗೂ ವ್ಯಕ್ತಿಗಳ ತಪಾಸಣೆ ಮಾಡದೆ ಹಾಗೆಯೇ ಬಿಡುವುದರ ಕುರಿತು, ಹೋಟೆಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ನಂತರ ವಿದ್ಯಾನಗರ ಠಾಣೆಗೆ ಬಂದ ಅವರು, ಪ್ರಕರಣದ ತನಿಖೆಯ ಬೆಳವಣಿಗೆ ಕುರಿತು ಮಾಹಿತಿ ಪಡೆದರು. ಪೊಲೀಸ್ ಕಮಿಷನರ್ ಲಾಭೂರಾಮ್, ಡಿಸಿಪಿಗಳಾದ ಗೋಪಾಲ ಬ್ಯಾಕೋಡ, ಸಾಹಿಲ್ ಬಾಗ್ಲಾ, ಎಸಿಪಿ ವಿನೋದ ಮುಕ್ತೇದಾರ ಹಾಗೂ ಇನ್ಸ್ಪೆಕ್ಟರ್ಗಳು ಇದ್ದರು.
ಇವನ್ನೂ ಓದಿ...
ಬಯಲಾಯ್ತು ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಕಾರಣ: ಏನದು?
ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ
5 ದಿನಗಳ ಹಿಂದೆಯೇ ಫೇಸ್ಬುಕ್ನಲ್ಲಿ ಗುರೂಜಿ ಕೊಲ್ಲುವ ಸುಳಿವು ನೀಡಿದ್ದ ಆರೋಪಿ
ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ನನ್ನ ಗಂಡ ಮಾಡಿದ್ದು ತಪ್ಪು ಎಂದ ಆರೋಪಿ ಪತ್ನಿ
ಎಂಜಿನಿಯರ್ ಆಗಬೇಕಿದ್ದ ಚಂದ್ರಶೇಖರ್ ಗುರೂಜಿ ಸರಳ ವಾಸ್ತು ತಜ್ಞರಾಗಿದ್ದು ಹೇಗೆ?
ಸರಳ ವಾಸ್ತು ಚಂದ್ರಶೇಖರ್ ಗುರೂಜಿಗೆ 40 ಬಾರಿ ಚಾಕು ಇರಿತ!
ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಸರಳವಾಸ್ತು ಚಂದ್ರಶೇಖರ್ ಗುರೂಜಿ ಹಂತಕರ ಬಂಧನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.