ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ಕ್ಕೆ ಪರ್ಯಾಯ ರೈತ ಗಣರಾಜ್ಯೋತ್ಸವ: ಕುರುಬೂರು ಶಾಂತಕುಮಾರ

Last Updated 18 ಜನವರಿ 2021, 10:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟ ಬೆಂಬಲಿಸಿ ಜ.26 ರಂದು ಬೆಂಗಳೂರಿನಲ್ಲಿ ರೈತರ ಗಣರಾಜ್ಯೋತ್ಸವ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 52 ದಿನಗಳಿಂದ ರೈತರು ಹೋರಾಟ ಮಾಡಿ ತಮ್ಮ ಪ್ರಾಣ ಬಲಿದಾನ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಸಮಸ್ಯೆ ಬಗೆಹರಿಸಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲ. ಪ್ರಜಾಪ್ರಭುತ್ವ ವಿರೋಧಿ ಕೃಷಿ ಕಾಯ್ದೆ ಜಾರಿಗೆ ತರಲಾಗಿದೆ. ಚಳವಳಿ ಹತ್ತಿಕ್ಕಲು ವಾಮಮಾರ್ಗ ಅನುಸರಿ ಸುತ್ತಿದೆ. ಆದರೆ ಯಾವುದೇ ವಾಮಮಾರ್ಗಕ್ಕೆ ರೈತರು ಬಗ್ಗುವದಿಲ್ಲ ಎಂದು ಎಚ್ಚರಿಕೆ ನೀಡಿದರು.

ಜ. 26ರಂದು ಪರ್ಯಾಯ ಗಣರಾಜೋತ್ಸವ ಪರೆಡ್ ದೇಶದ ಉದ್ದಗಲಕ್ಕೂ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ 15 ಸಾವಿರಕ್ಕೂ ಹೆಚ್ಚು ವಾಹನಗಳ ಪರೆಡ್ ಮಾಡಲಾಗುವುದು ಎಂದರು.


ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರನಗೌಡ ಪಾಟೀಲ, ಎಂ.ವಿ.ಗಾಡಿ, ಎಂ.ಜಿ.ಸಿಂದಗಿ, ಎನ್.ಎಚ್.ದೇವಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT