ರೈಲಿನಲ್ಲಿದ್ದ ಪ್ರಯಾಣಿಕರಿಗೆ ಬೆಳಿಗ್ಗೆ ಉಪಾಹಾರ ಹಾಗೂ ಊಟ ಪೂರೈಕೆ ಮಾಡಲಾಗಿದೆ. ಘಟನೆಯಲ್ಲಿ ರೈಲಿನ ಬೋಗಿಗಳಿಗೂ ಯಾವುದೇ ಹಾನಿಯಾಗಿಲ್ಲ. ರೈಲಿನ ಕಾರ್ಯಾಚರಣೆ 11.30ರ ಹೊತ್ತಿಗೆ ಪೂರ್ಣಗೊಳಿಸಿ, ಪ್ರಯಾಣಿಕರಿದ್ದ ಬೋಗಿಗಳನ್ನು ಕುಲೇಂಗೆ ಕಳಿಸಲಾಯಿತು. ಅಲ್ಲಿ ಬೇರೆ ಎಂಜಿನ್ ವ್ಯವಸ್ಥೆ ಮಾಡಿ ಮಧ್ಯಾಹ್ನ 2 ಗಂಟೆಗೆ ರೈಲು ಕುಲೇಂನಿಂದ ಮತ್ತೆ ಸಂಚಾರ ಆರಂಭಿಸಿತು.