<p><strong>ಧಾರವಾಡ</strong>: ತಾಲ್ಲೂಕಿನ ಗರಗ ಗ್ರಾಮದ ಭೋವಿ ಓಣಿಯಲ್ಲಿ ಸ್ಥಾಪಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತೆರವುಗೊಳಿಸಿ ಅವಮಾನ ಎಸಗಲಾಗಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ವಡ್ಡರ ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಹಾಗೂ ಸಮತಾ ಸೇನಾ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಘೋಷಣೆ ಕೂಗಿದರು.</p>.<p>ಅಂಬೇಡ್ಕರ್ ಅವರ ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಮೂರು ದಿನಗಳ ಒಳಗೆ ಪ್ರತಿಮೆಯನ್ನು ಆ ಜಾಗದಲ್ಲಿ ಮರುಸ್ಥಾಪನೆ ಮಾಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಗುರುನಾಥ ಉಳ್ಳಿಕಾಶಿ, ಮಂಜನಾಥ ಹಿರೇಮಠ, ವೆಂಕಟೇಶ ಮೇಸ್ತ್ರಿ, ಹರೀಶ ಪೂಜಾರ, ಪ್ರಕಾಶ ಪೂಜಾರ, ಮಂಜು ಮುಗದ, ರಾಯಣ್ಣ ವಡ್ಡರ, ನಿಂಗಪ್ಪ ವಡ್ಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ತಾಲ್ಲೂಕಿನ ಗರಗ ಗ್ರಾಮದ ಭೋವಿ ಓಣಿಯಲ್ಲಿ ಸ್ಥಾಪಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತೆರವುಗೊಳಿಸಿ ಅವಮಾನ ಎಸಗಲಾಗಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ವಡ್ಡರ ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಹಾಗೂ ಸಮತಾ ಸೇನಾ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಘೋಷಣೆ ಕೂಗಿದರು.</p>.<p>ಅಂಬೇಡ್ಕರ್ ಅವರ ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಮೂರು ದಿನಗಳ ಒಳಗೆ ಪ್ರತಿಮೆಯನ್ನು ಆ ಜಾಗದಲ್ಲಿ ಮರುಸ್ಥಾಪನೆ ಮಾಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಗುರುನಾಥ ಉಳ್ಳಿಕಾಶಿ, ಮಂಜನಾಥ ಹಿರೇಮಠ, ವೆಂಕಟೇಶ ಮೇಸ್ತ್ರಿ, ಹರೀಶ ಪೂಜಾರ, ಪ್ರಕಾಶ ಪೂಜಾರ, ಮಂಜು ಮುಗದ, ರಾಯಣ್ಣ ವಡ್ಡರ, ನಿಂಗಪ್ಪ ವಡ್ಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>