<p><strong>ಹುಬ್ಬಳ್ಳಿ</strong>: ‘ಹಾವೇರಿ ತಾಲ್ಲೂಕಿನ ಕಂಚಾರಗಟ್ಟಿಯ ನರಸೀಪುರದಲ್ಲಿನ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ 2026ರ ಜನವರಿ 14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ–2026 ಹಮ್ಮಿಕೊಳ್ಳಲಾಗಿದೆ’ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. </p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘14ರಂದು ಬೆಳಿಗ್ಗೆ 6ಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ, 8 ಗಂಟೆಗೆ ಚೌಡಯ್ಯನವರ ಐಕ್ಯಮಂಟಪದ ಪೂಜೆ, 10 ಗಂಟೆಗೆ ರಕ್ತದಾನ ಶಿಬಿರ, 11 ಗಂಟೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>‘ನಂತರ ಪ್ರತಿಭಾ ಪುರಸ್ಕಾರ, ವಚನ ಕಂಠಪಾಠ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಸಂಜೆ 7ಕ್ಕೆ ಗಂಗಾರತಿ, ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಅವರು <br>ಹೇಳಿದರು.</p>.<p>‘15ರಂದು ಬೆಳಿಗ್ಗೆ 8ಕ್ಕೆ ಧರ್ಮ ಧ್ವಜಾರೋಹಣ, ನಂತರ ಧರ್ಮಸಭೆ ನಡೆಯಲಿದೆ. ಇದೇ ವೇಳೆ ಅಂಬಿಗರ ಚೌಡಯ್ಯನವರ ಶಿಲಾಮಂಟಪ, ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ’ ಎಂದರು. </p>.<p>‘ಬೆಳಿಗ್ಗೆ 11 ಗಂಟೆಗೆ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯುತ್ಸವ, ನಂತರ ನಮ್ಮ ಪೀಠಾರೋಹಣದ ದಶಮಾನೋತ್ಸವ ಕಾರ್ಯಕ್ರಮ, ಸಂಜೆ 5ಕ್ಕೆ ವಚನ ಗ್ರಂಥ ಮಹಾರಥೋತ್ಸವ ನಡೆಯಲಿದೆ’ ಎಂದು ಮಾಹಿತಿ ನೀಡಿದರು.</p>.<p>ಶೇಖರಪ್ಪ ಪೂಜಾರಿ, ಗದ್ದಿಗೆಪ್ಪ ಅಮರಗೋಳ, ಮಂಜುನಾಥ, ಪಕ್ಕಿರಪ್ಪ ತಿಮ್ಮನಕಟ್ಟಿ, ಮಾರುತಿ, ಸಿದ್ದರಾಮ ಹಾಜರಿದ್ದರು. </p>.<p> <strong>‘ಚೌಡಯ್ಯ ಹೆಸರಿನ ಪ್ರಾಧಿಕಾರ ರಚಿಸಿ’ </strong></p><p>‘ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಿನಲ್ಲಿ ಪ್ರಾಧಿಕಾರ ರಚಿಸಬೇಕು. ಐಕ್ಯಮಂಟಪದ ಅಭಿವೃದ್ಧಿಗೆ ಕ್ರಮವಹಿಸಬೇಕು. ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕ್ರಮವಹಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ’ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಹಾವೇರಿ ತಾಲ್ಲೂಕಿನ ಕಂಚಾರಗಟ್ಟಿಯ ನರಸೀಪುರದಲ್ಲಿನ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ 2026ರ ಜನವರಿ 14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ–2026 ಹಮ್ಮಿಕೊಳ್ಳಲಾಗಿದೆ’ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. </p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘14ರಂದು ಬೆಳಿಗ್ಗೆ 6ಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ, 8 ಗಂಟೆಗೆ ಚೌಡಯ್ಯನವರ ಐಕ್ಯಮಂಟಪದ ಪೂಜೆ, 10 ಗಂಟೆಗೆ ರಕ್ತದಾನ ಶಿಬಿರ, 11 ಗಂಟೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>‘ನಂತರ ಪ್ರತಿಭಾ ಪುರಸ್ಕಾರ, ವಚನ ಕಂಠಪಾಠ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಸಂಜೆ 7ಕ್ಕೆ ಗಂಗಾರತಿ, ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಅವರು <br>ಹೇಳಿದರು.</p>.<p>‘15ರಂದು ಬೆಳಿಗ್ಗೆ 8ಕ್ಕೆ ಧರ್ಮ ಧ್ವಜಾರೋಹಣ, ನಂತರ ಧರ್ಮಸಭೆ ನಡೆಯಲಿದೆ. ಇದೇ ವೇಳೆ ಅಂಬಿಗರ ಚೌಡಯ್ಯನವರ ಶಿಲಾಮಂಟಪ, ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ’ ಎಂದರು. </p>.<p>‘ಬೆಳಿಗ್ಗೆ 11 ಗಂಟೆಗೆ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯುತ್ಸವ, ನಂತರ ನಮ್ಮ ಪೀಠಾರೋಹಣದ ದಶಮಾನೋತ್ಸವ ಕಾರ್ಯಕ್ರಮ, ಸಂಜೆ 5ಕ್ಕೆ ವಚನ ಗ್ರಂಥ ಮಹಾರಥೋತ್ಸವ ನಡೆಯಲಿದೆ’ ಎಂದು ಮಾಹಿತಿ ನೀಡಿದರು.</p>.<p>ಶೇಖರಪ್ಪ ಪೂಜಾರಿ, ಗದ್ದಿಗೆಪ್ಪ ಅಮರಗೋಳ, ಮಂಜುನಾಥ, ಪಕ್ಕಿರಪ್ಪ ತಿಮ್ಮನಕಟ್ಟಿ, ಮಾರುತಿ, ಸಿದ್ದರಾಮ ಹಾಜರಿದ್ದರು. </p>.<p> <strong>‘ಚೌಡಯ್ಯ ಹೆಸರಿನ ಪ್ರಾಧಿಕಾರ ರಚಿಸಿ’ </strong></p><p>‘ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಿನಲ್ಲಿ ಪ್ರಾಧಿಕಾರ ರಚಿಸಬೇಕು. ಐಕ್ಯಮಂಟಪದ ಅಭಿವೃದ್ಧಿಗೆ ಕ್ರಮವಹಿಸಬೇಕು. ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕ್ರಮವಹಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ’ ಎಂದು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>