<p><strong>ಹುಬ್ಬಳ್ಳಿ</strong>: ಕಿವಿಗಡಚಿಕ್ಕುವ ಕಹಳೆ ವಾದನ, ಗುಂಪು ಗುಂಪಾಗಿ ಸೇರಿದ ಜನ, ಕಂಬಗಳ ತುದಿಯಲ್ಲಿ ಹಾರುತ್ತಿರುವ ಪತಾಕೆಗಳು ರಸ್ತೆಯಲ್ಲಿ ಹೋಗುತ್ತಿರುವವರನ್ನು ಸೆಳೆಯುತ್ತಿತ್ತು.</p>.<p>ಈ ದೃಶ್ಯ ಕಂಡುಬಂದಿದ್ದು ಇಲ್ಲಿನ ಉಣಕಲ್ ಕೆರೆ ಪಕ್ಕದ ಬಯಲು ಪ್ರದೇಶದಲ್ಲಿ. ಭಾನುವಾರ ಇಳಿಸಂಜೆಯಲ್ಲಿ ಅಲ್ಲಿ ಉಣಕಲ್ ಸಿದ್ಧಪ್ಪಜ್ಜನ ಜಾತ್ರೆಯ ಅಂಗವಾಗಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು.</p>.<p>8–10 ವರ್ಷದ ಬಾಲಕರಿಂದ ಹಿಡಿದು ಹಿರಿಯರ ಕುಸ್ತಿ ಪಂದ್ಯಾವಳಿಯೂ ನಡೆಯಿತು. ಬಾಲಕಿಯರೂ ತಾವೂ ಯಾರಿಗೂ ಕಮ್ಮಿ ಇಲ್ಲ ಎಂದು ಮಣ್ಣಿನ ಅಖಾಡಕ್ಕಿಳಿದು ತೊಡೆ ತಟ್ಟಿದರು.</p>.<p>ಜಮಖಂಡಿ, ಮುಧೋಳ, ಗದಗ ಸೇರಿದಂತೆ ವಿವಿಧೆಡೆಗಳಿಂದ ಬಂದ ಮರಿ ಪೈಲ್ವಾನರು ಸೋಲನ್ನೇ ಸೋಲಿಸುವವರಂತೆ ಪಟ್ಟು ಹಾಕಿ ಎದುರಾಳಿ ಪೈಲ್ವಾನರನ್ನು ಧರಾಶಾಹಿಯನ್ನಾಗಿ ಮಾಡುತ್ತಿದ್ದರು. ಸುತ್ತಲೂ ನೆರೆದಿದ್ದ ನೂರಾರು ಪ್ರೇಕ್ಷಕರುಚಪ್ಪಾಳೆ, ಶಿಳ್ಳೆ ಹಾಕಿ ಪೈಲ್ವಾನರನ್ನು ಪ್ರೋತ್ಸಾಹಿಸುತ್ತಿದ್ದರು. ತಮ್ಮ ನೆಚ್ಚಿನ ಪೈಲ್ವಾನರ ಮೇಲೆ ಬಾಜಿ ಕಟ್ಟುತ್ತಿದ್ದರು.</p>.<p class="Subhead">ಧಾರ್ಮಿಕ ಕಾರ್ಯಕ್ರಮ: ಜಾತ್ರೆಯ ಮುಕ್ತಾಯದ ಭಾಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ಕಳಸ ಇಳಿಸುವ ಕಾರ್ಯಕ್ರಮ ಜರುಗಿತು. ನಂತರ ಗ್ರಾಮದ ಹಿರಿಯರನ್ನು ಸನ್ಮಾನಿಸಲಾಯಿತು. ರಾತ್ರಿ ಮಹಾಪ್ರಸಾದ ವಿತರಿಸಲಾಯಿತು. ಕೊನೆಯ ಘಟ್ಟವಾಗಿ ಭಜನಾ ಸ್ಪರ್ಧೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕಿವಿಗಡಚಿಕ್ಕುವ ಕಹಳೆ ವಾದನ, ಗುಂಪು ಗುಂಪಾಗಿ ಸೇರಿದ ಜನ, ಕಂಬಗಳ ತುದಿಯಲ್ಲಿ ಹಾರುತ್ತಿರುವ ಪತಾಕೆಗಳು ರಸ್ತೆಯಲ್ಲಿ ಹೋಗುತ್ತಿರುವವರನ್ನು ಸೆಳೆಯುತ್ತಿತ್ತು.</p>.<p>ಈ ದೃಶ್ಯ ಕಂಡುಬಂದಿದ್ದು ಇಲ್ಲಿನ ಉಣಕಲ್ ಕೆರೆ ಪಕ್ಕದ ಬಯಲು ಪ್ರದೇಶದಲ್ಲಿ. ಭಾನುವಾರ ಇಳಿಸಂಜೆಯಲ್ಲಿ ಅಲ್ಲಿ ಉಣಕಲ್ ಸಿದ್ಧಪ್ಪಜ್ಜನ ಜಾತ್ರೆಯ ಅಂಗವಾಗಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು.</p>.<p>8–10 ವರ್ಷದ ಬಾಲಕರಿಂದ ಹಿಡಿದು ಹಿರಿಯರ ಕುಸ್ತಿ ಪಂದ್ಯಾವಳಿಯೂ ನಡೆಯಿತು. ಬಾಲಕಿಯರೂ ತಾವೂ ಯಾರಿಗೂ ಕಮ್ಮಿ ಇಲ್ಲ ಎಂದು ಮಣ್ಣಿನ ಅಖಾಡಕ್ಕಿಳಿದು ತೊಡೆ ತಟ್ಟಿದರು.</p>.<p>ಜಮಖಂಡಿ, ಮುಧೋಳ, ಗದಗ ಸೇರಿದಂತೆ ವಿವಿಧೆಡೆಗಳಿಂದ ಬಂದ ಮರಿ ಪೈಲ್ವಾನರು ಸೋಲನ್ನೇ ಸೋಲಿಸುವವರಂತೆ ಪಟ್ಟು ಹಾಕಿ ಎದುರಾಳಿ ಪೈಲ್ವಾನರನ್ನು ಧರಾಶಾಹಿಯನ್ನಾಗಿ ಮಾಡುತ್ತಿದ್ದರು. ಸುತ್ತಲೂ ನೆರೆದಿದ್ದ ನೂರಾರು ಪ್ರೇಕ್ಷಕರುಚಪ್ಪಾಳೆ, ಶಿಳ್ಳೆ ಹಾಕಿ ಪೈಲ್ವಾನರನ್ನು ಪ್ರೋತ್ಸಾಹಿಸುತ್ತಿದ್ದರು. ತಮ್ಮ ನೆಚ್ಚಿನ ಪೈಲ್ವಾನರ ಮೇಲೆ ಬಾಜಿ ಕಟ್ಟುತ್ತಿದ್ದರು.</p>.<p class="Subhead">ಧಾರ್ಮಿಕ ಕಾರ್ಯಕ್ರಮ: ಜಾತ್ರೆಯ ಮುಕ್ತಾಯದ ಭಾಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ಕಳಸ ಇಳಿಸುವ ಕಾರ್ಯಕ್ರಮ ಜರುಗಿತು. ನಂತರ ಗ್ರಾಮದ ಹಿರಿಯರನ್ನು ಸನ್ಮಾನಿಸಲಾಯಿತು. ರಾತ್ರಿ ಮಹಾಪ್ರಸಾದ ವಿತರಿಸಲಾಯಿತು. ಕೊನೆಯ ಘಟ್ಟವಾಗಿ ಭಜನಾ ಸ್ಪರ್ಧೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>