<p><strong>ಹುಬ್ಬಳ್ಳಿ</strong>: ‘ರಾಜ್ಯ ಅಂಗನವಾಡಿ ನೌಕರರ ಸಂಘ ಮತ್ತು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 1ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೋರಾಟ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ ಎಂಟು ಜಿಲ್ಲೆಯ ಕಾರ್ಯಕರ್ತರು ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿ ಎದುರು ಹೋರಾಟ ಆರಂಭಿಸಲಿದ್ದಾರೆ. ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯದ ಎಲ್ಲ ಸಂಸದರಿಗೆ ಮನವಿ ಪತ್ರ ಸಲ್ಲಿಸುತ್ತೇವೆ’ ಎಂದರು.</p>.<p>‘ಬಿಸಿಯೂಟ ಮತ್ತು ಆಶಾ ಯೋಜನೆ ಸಿಬ್ಬಂದಿ ಸೇವೆಯನ್ನು ಕಾಯಂಗೊಳಿಸಬೇಕು. ಈ ಯೋಜನೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಶಾಸನಾತ್ಮಕ ಸೌಲಭ್ಯ ನೀಡಬೇಕು, 2018ರಿಂದ ಅನ್ವಯವಾಗುವಂತೆ ಅಂಗನವಾಡಿ ನೌಕರರ ವೇತನ ಹೆಚ್ಚಳ ಮಾಡಬೇಕು, ಸ್ಥಳೀಯ ಆಹಾರ ಪದಾರ್ಥಗಳ ಪೂರೈಕೆಗೆ <br>ಒತ್ತು ನೀಡಬೇಕು, ಹೆಚ್ಚುವರಿ ಕೆಲಸ ನೀಡದೆ, ಆರು ಗಂಟೆ ನಿಗದಿಪಡಿಸಬೇಕು ಸೇರಿದಂತೆ ಹತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಗುವುದು’ ಎಂದು <br>ಹೇಳಿದರು.</p>.<p>‘ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಬಂದ ಮೇಲೆ ಈ ಯೋಜನೆಗಳಿಗೆ ನೀಡುವ ಅನುದಾನ ಕಡಿಮೆಯಾಗಿದೆ. ಶೇ 90ರಷ್ಟು ದೊರೆಯುತ್ತಿದ್ದ ಅನುದಾನ ಶೇ 60ಕ್ಕೆ ಇಳಿಕೆಯಾಗಿದೆ. ಬೆಲೆ ಏರಿಕೆ ನೆಪದಲ್ಲಿ ಬಜೆಟ್ನಲ್ಲಿಯೂ ಹಣ ಮೀಸಲಿಡುತ್ತಿಲ್ಲ. ಇದರಿಂದ ಗುಣಮಟ್ಟದ ಆಹಾರ ಪೂರೈಸಲು ಸಾಧ್ಯವಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಮುಖಂಡರಾದ ಮಹೇಶ ಪತ್ತಾರ, ಮಾಲಿನಿ ಮೇಸ್ತಾ ಇದ್ದರು.</p>
<p><strong>ಹುಬ್ಬಳ್ಳಿ</strong>: ‘ರಾಜ್ಯ ಅಂಗನವಾಡಿ ನೌಕರರ ಸಂಘ ಮತ್ತು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 1ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೋರಾಟ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ ಎಂಟು ಜಿಲ್ಲೆಯ ಕಾರ್ಯಕರ್ತರು ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿ ಎದುರು ಹೋರಾಟ ಆರಂಭಿಸಲಿದ್ದಾರೆ. ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯದ ಎಲ್ಲ ಸಂಸದರಿಗೆ ಮನವಿ ಪತ್ರ ಸಲ್ಲಿಸುತ್ತೇವೆ’ ಎಂದರು.</p>.<p>‘ಬಿಸಿಯೂಟ ಮತ್ತು ಆಶಾ ಯೋಜನೆ ಸಿಬ್ಬಂದಿ ಸೇವೆಯನ್ನು ಕಾಯಂಗೊಳಿಸಬೇಕು. ಈ ಯೋಜನೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಶಾಸನಾತ್ಮಕ ಸೌಲಭ್ಯ ನೀಡಬೇಕು, 2018ರಿಂದ ಅನ್ವಯವಾಗುವಂತೆ ಅಂಗನವಾಡಿ ನೌಕರರ ವೇತನ ಹೆಚ್ಚಳ ಮಾಡಬೇಕು, ಸ್ಥಳೀಯ ಆಹಾರ ಪದಾರ್ಥಗಳ ಪೂರೈಕೆಗೆ <br>ಒತ್ತು ನೀಡಬೇಕು, ಹೆಚ್ಚುವರಿ ಕೆಲಸ ನೀಡದೆ, ಆರು ಗಂಟೆ ನಿಗದಿಪಡಿಸಬೇಕು ಸೇರಿದಂತೆ ಹತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಗುವುದು’ ಎಂದು <br>ಹೇಳಿದರು.</p>.<p>‘ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಬಂದ ಮೇಲೆ ಈ ಯೋಜನೆಗಳಿಗೆ ನೀಡುವ ಅನುದಾನ ಕಡಿಮೆಯಾಗಿದೆ. ಶೇ 90ರಷ್ಟು ದೊರೆಯುತ್ತಿದ್ದ ಅನುದಾನ ಶೇ 60ಕ್ಕೆ ಇಳಿಕೆಯಾಗಿದೆ. ಬೆಲೆ ಏರಿಕೆ ನೆಪದಲ್ಲಿ ಬಜೆಟ್ನಲ್ಲಿಯೂ ಹಣ ಮೀಸಲಿಡುತ್ತಿಲ್ಲ. ಇದರಿಂದ ಗುಣಮಟ್ಟದ ಆಹಾರ ಪೂರೈಸಲು ಸಾಧ್ಯವಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಮುಖಂಡರಾದ ಮಹೇಶ ಪತ್ತಾರ, ಮಾಲಿನಿ ಮೇಸ್ತಾ ಇದ್ದರು.</p>