<p><strong>ಹುಬ್ಬಳ್ಳಿ</strong>: ‘ಅಂಜಲಿ ಅಂಬಿಗೇರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದು ಖಂಡನೀಯ. ಇದು ಅತ್ಯಂತ ದಾರುಣವಾದ ಘಟನೆ. ಆರೋಪಿ ಮನೆಗೆ ನುಗ್ಗಿ ಕೊಲೆ ಮಾಡಿ ಹೋಗುತ್ತಾನೆ ಎಂದರೆ ಈ ನೆಲದ ಕಾನೂನಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p><p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ನೆಲದ ಕಾನೂನಿನ ಮೇಲಿನ ಗೌರವ ಉಳಿಯಬೇಕಾದರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು, ಜನರಿಗೆ ಸುರಕ್ಷತೆ ಇದೆ ಎಂದು ತೋರಿಸಿ ಕೊಡಬೇಕು’ ಎಂದು ಆಗ್ರಹಿಸಿದರು.</p><p>‘ಇಂತಹ ಪರಿಸ್ಥಿತಿಯಲ್ಲಿ ಕೊಲೆಯಾದ ಯುವತಿ ಕುಟುಂಬಕ್ಕೆ ಇಡೀ ಸಮಾಜ ಬೆಂಬಲಕ್ಕೆ ನಿಂತಿದೆ. ಸರ್ಕಾರ ಸಹ ಬದ್ಧತೆ ತೋರಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು’ ಎಂದರು.</p><p>‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿಯ ಮೇಲೆ ಪ್ರಭಾವ ಬೀರಿರಬಹುದು. ಇಲ್ಲ ಎಂದು ಹೇಳಲಾಗುವುದಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ನೋಡಿಕೊಳ್ಳಬೇಕು. ಕಾನೂನಿಗೆ ಬೆಲೆ ಇದೆ ಎಂದು ತೋರಿಸಬೇಕು’ ಎಂದು ಹೇಳಿದರು.</p><p>‘ಅಂಜಲಿ ಅವರ ಸಹೋದರಿಯರಿಗೆ ಮೂರು ಸಾವಿರ ಮಠದ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡಲಾಗುವುದು’ ಎಂದು ವಾಗ್ದಾನ ನೀಡಿದರು.</p><p>ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ಬಿಜಕಲ್ ವಿರಕ್ತ ಮಠದ ಶಿವಲಿಂಗ ಸ್ವಾಮೀಜಿ, ಮೂರು ಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಅವರು ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಅಂಜಲಿ ಅಂಬಿಗೇರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದು ಖಂಡನೀಯ. ಇದು ಅತ್ಯಂತ ದಾರುಣವಾದ ಘಟನೆ. ಆರೋಪಿ ಮನೆಗೆ ನುಗ್ಗಿ ಕೊಲೆ ಮಾಡಿ ಹೋಗುತ್ತಾನೆ ಎಂದರೆ ಈ ನೆಲದ ಕಾನೂನಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p><p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ನೆಲದ ಕಾನೂನಿನ ಮೇಲಿನ ಗೌರವ ಉಳಿಯಬೇಕಾದರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು, ಜನರಿಗೆ ಸುರಕ್ಷತೆ ಇದೆ ಎಂದು ತೋರಿಸಿ ಕೊಡಬೇಕು’ ಎಂದು ಆಗ್ರಹಿಸಿದರು.</p><p>‘ಇಂತಹ ಪರಿಸ್ಥಿತಿಯಲ್ಲಿ ಕೊಲೆಯಾದ ಯುವತಿ ಕುಟುಂಬಕ್ಕೆ ಇಡೀ ಸಮಾಜ ಬೆಂಬಲಕ್ಕೆ ನಿಂತಿದೆ. ಸರ್ಕಾರ ಸಹ ಬದ್ಧತೆ ತೋರಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು’ ಎಂದರು.</p><p>‘ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿಯ ಮೇಲೆ ಪ್ರಭಾವ ಬೀರಿರಬಹುದು. ಇಲ್ಲ ಎಂದು ಹೇಳಲಾಗುವುದಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ನೋಡಿಕೊಳ್ಳಬೇಕು. ಕಾನೂನಿಗೆ ಬೆಲೆ ಇದೆ ಎಂದು ತೋರಿಸಬೇಕು’ ಎಂದು ಹೇಳಿದರು.</p><p>‘ಅಂಜಲಿ ಅವರ ಸಹೋದರಿಯರಿಗೆ ಮೂರು ಸಾವಿರ ಮಠದ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡಲಾಗುವುದು’ ಎಂದು ವಾಗ್ದಾನ ನೀಡಿದರು.</p><p>ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ಬಿಜಕಲ್ ವಿರಕ್ತ ಮಠದ ಶಿವಲಿಂಗ ಸ್ವಾಮೀಜಿ, ಮೂರು ಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಅವರು ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>