<p><strong>ಹುಬ್ಬಳ್ಳಿ: </strong>ಲೋಕಪಾಲ್ ಮಸೂದೆ ಜಾರಿಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಭ್ರಷ್ಟಾಚಾರ ವಿರೋಧಿ ಜನಾಂದೋಲನ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಧರಣಿ ನಡೆಸಿದರು.</p>.<p>ತಹಶೀಲ್ದಾರ್ ಕಚೇರಿ ಎದುರು ಒಂದು ದಿನದ ಧರಣಿ ನಡೆಸಿದ ಹೋರಾಟಗಾರರು ಲೋಕಪಾಲ್ ಮಸೂದೆ ಜಾರಿಗೆ ತರಬೇಕು. ಲೋಕಾಯುಕ್ತರನ್ನು ನೇಮಿಸಬೇಕು. ಸ್ವಾಮಿನಾಥನ್ ವರದಿ ಶಿಫಾರಸು ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಹೋರಾಟಗಾರ ಅಮೃತ ಇಜಾರಿ ಮಾತನಾಡಿ ‘ಅಣ್ಣಾ ಹಜಾರೆ ಅವರು ಭ್ರಷ್ಟಾಚಾರದ ವಿರುದ್ಧ ನಾಲ್ಕು ದಶಕ ಹೋರಾಟ ಮಾಡಿದ್ದರಿಂದ ಲೋಕಪಾಲ್ ಮಸೂದೆ ಸಂಸತ್ತಿನಲ್ಲಿ ಅನುಮೋದನೆಗೊಂಡಿದೆ. ಕೇಂದ್ರ ಸರ್ಕಾರ ಇದನ್ನು ಜಾರಿಗೆ ತರಬೇಕು. ಈ ಬೇಡಿಕೆಗಳನ್ನು ಈಡೇರಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿ ಅಣ್ಣಾ ಹಜಾರೆ ಅವರು ಕೇಂದ್ರಕ್ಕೆ ಬರೆದ 36 ಪತ್ರಗಳಿಗೆ ಪ್ರಧಾನಿ ಕಾರ್ಯಾಲಯ ಉತ್ತರಿಸಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ಹೋರಾಟ ಚುರುಕುಗೊಳಿಸಲಾಗುವುದು’ ಎಂದರು.</p>.<p>ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ‘ಮಹದಾಯಿ, ಕಳಸಾ ಬಂಡೂರಿ ಕಾಮಗಾರಿ ತುರ್ತಾಗಿ ಆರಂಭಿಸಬೇಕು’ ಎಂದು ಆಗ್ರಹಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಧರಣಿ ನಿರತ ಸ್ಥಳಕ್ಕೆ ಬಂದು ಬೆಂಬಲ ವ್ಯಕ್ತಪಡಿಸಿದರು.</p>.<p>ವಿವಿಧ ಸಂಘಟನೆಗಳ ಪ್ರಮುಖರಾದ ರಾಮ್ ನಾಯಕ್, ಪುಟ್ಟಪ್ಪ ಜಾಧವ್, ಎಂ.ಡಿ. ಚಿಕ್ಕಣ್ಣವರ, ಬಸಪ್ಪ ಬೀರಣ್ಣವರ, ವಿನಯ ಗೋಕಾವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಲೋಕಪಾಲ್ ಮಸೂದೆ ಜಾರಿಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಭ್ರಷ್ಟಾಚಾರ ವಿರೋಧಿ ಜನಾಂದೋಲನ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಧರಣಿ ನಡೆಸಿದರು.</p>.<p>ತಹಶೀಲ್ದಾರ್ ಕಚೇರಿ ಎದುರು ಒಂದು ದಿನದ ಧರಣಿ ನಡೆಸಿದ ಹೋರಾಟಗಾರರು ಲೋಕಪಾಲ್ ಮಸೂದೆ ಜಾರಿಗೆ ತರಬೇಕು. ಲೋಕಾಯುಕ್ತರನ್ನು ನೇಮಿಸಬೇಕು. ಸ್ವಾಮಿನಾಥನ್ ವರದಿ ಶಿಫಾರಸು ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಹೋರಾಟಗಾರ ಅಮೃತ ಇಜಾರಿ ಮಾತನಾಡಿ ‘ಅಣ್ಣಾ ಹಜಾರೆ ಅವರು ಭ್ರಷ್ಟಾಚಾರದ ವಿರುದ್ಧ ನಾಲ್ಕು ದಶಕ ಹೋರಾಟ ಮಾಡಿದ್ದರಿಂದ ಲೋಕಪಾಲ್ ಮಸೂದೆ ಸಂಸತ್ತಿನಲ್ಲಿ ಅನುಮೋದನೆಗೊಂಡಿದೆ. ಕೇಂದ್ರ ಸರ್ಕಾರ ಇದನ್ನು ಜಾರಿಗೆ ತರಬೇಕು. ಈ ಬೇಡಿಕೆಗಳನ್ನು ಈಡೇರಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿ ಅಣ್ಣಾ ಹಜಾರೆ ಅವರು ಕೇಂದ್ರಕ್ಕೆ ಬರೆದ 36 ಪತ್ರಗಳಿಗೆ ಪ್ರಧಾನಿ ಕಾರ್ಯಾಲಯ ಉತ್ತರಿಸಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ಹೋರಾಟ ಚುರುಕುಗೊಳಿಸಲಾಗುವುದು’ ಎಂದರು.</p>.<p>ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ‘ಮಹದಾಯಿ, ಕಳಸಾ ಬಂಡೂರಿ ಕಾಮಗಾರಿ ತುರ್ತಾಗಿ ಆರಂಭಿಸಬೇಕು’ ಎಂದು ಆಗ್ರಹಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಧರಣಿ ನಿರತ ಸ್ಥಳಕ್ಕೆ ಬಂದು ಬೆಂಬಲ ವ್ಯಕ್ತಪಡಿಸಿದರು.</p>.<p>ವಿವಿಧ ಸಂಘಟನೆಗಳ ಪ್ರಮುಖರಾದ ರಾಮ್ ನಾಯಕ್, ಪುಟ್ಟಪ್ಪ ಜಾಧವ್, ಎಂ.ಡಿ. ಚಿಕ್ಕಣ್ಣವರ, ಬಸಪ್ಪ ಬೀರಣ್ಣವರ, ವಿನಯ ಗೋಕಾವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>