<p><strong>ಅಣ್ಣಿಗೇರಿ:</strong> ತಾಲ್ಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಮೂರ್ತಿಗಳ ಪುರ ಪ್ರವೇಶ ಈಚೆಗೆ ಸಂಭ್ರಮದಿಂದ ನಡೆಯಿತು.</p>.<p>ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಾದ್ಯ ಮೇಳದ ಜತೆಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಮಹಿಳೆಯರು ಕುಂಭ ಹೊತ್ತು, ಆರತಿ ಹಿಡಿದು ಮೆರವಣಿಗೆಯಲ್ಲಿ ಸಾಗಿದರು.</p>.<p>ಬಿಸಿಲನ್ನು ಲೆಕ್ಕಿಸದೆ ಮಹಿಳೆಯರು ಸಾಂಪ್ರದಾಯಕ ಉಡುಪು ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದರು. ಗ್ರಾಮದಲ್ಲಿ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಗಳು, ನಾಟಕ, ಸವಾಲ್ ಭಜನಾ ಪದ, ರಸಮಂಜರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.</p>.<p>ಕಾರ್ಯಕ್ರಮದಲ್ಲಿ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ನವಲಗುಂದದ ಬಸವಲಿಂಗ ಸ್ವಾಮೀಜಿ, ಎ.ಸಿ.ವಾಲಿ ಗುರೂಜಿ, ವೀರೇಂದ್ರ ಸ್ವಾಮೀಜಿ, ದಯಾನಂದ ಸ್ವಾಮೀಜಿ, ಹೊಸಳ್ಳಿಯ ಬೂದೀಶ್ವರ ಸ್ವಾಮೀಜಿ, ಶಿವಶರಣೆ ನೀಲಮ್ಮ ತಾಯಿ, ಗುದ್ನೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮಾತನಾಡಿ, ಗ್ರಾಮಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. </p>.<p>ಈ ಸಂದರ್ಭದಲ್ಲಿ ವಕೀಲ ಪ್ರಕಾಶ ಅಂಗಡಿ, ಗ್ರಾಮದ ಹಿರಿಯರಾದ ವಿ.ಡಿ.ಅಂದಾನಿಗೌಡ್ರ, ವೆಂಕರಡ್ಡಿ ಹೊಸಮನಿ, ಶಿವಾಜಿ ಮೊಖಾಸಿ, ಶಿವನಗೌಡ ಅಂದಾನಿಗೌಡ್ರ, ವಿನಾಯಕ ಬೋಸ್ಲೆ, ದೊಡ್ಡಫಕ್ಕಿರಪ್ಪ ಗಾಣಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ:</strong> ತಾಲ್ಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಮೂರ್ತಿಗಳ ಪುರ ಪ್ರವೇಶ ಈಚೆಗೆ ಸಂಭ್ರಮದಿಂದ ನಡೆಯಿತು.</p>.<p>ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಾದ್ಯ ಮೇಳದ ಜತೆಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಮಹಿಳೆಯರು ಕುಂಭ ಹೊತ್ತು, ಆರತಿ ಹಿಡಿದು ಮೆರವಣಿಗೆಯಲ್ಲಿ ಸಾಗಿದರು.</p>.<p>ಬಿಸಿಲನ್ನು ಲೆಕ್ಕಿಸದೆ ಮಹಿಳೆಯರು ಸಾಂಪ್ರದಾಯಕ ಉಡುಪು ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದರು. ಗ್ರಾಮದಲ್ಲಿ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಗಳು, ನಾಟಕ, ಸವಾಲ್ ಭಜನಾ ಪದ, ರಸಮಂಜರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.</p>.<p>ಕಾರ್ಯಕ್ರಮದಲ್ಲಿ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ನವಲಗುಂದದ ಬಸವಲಿಂಗ ಸ್ವಾಮೀಜಿ, ಎ.ಸಿ.ವಾಲಿ ಗುರೂಜಿ, ವೀರೇಂದ್ರ ಸ್ವಾಮೀಜಿ, ದಯಾನಂದ ಸ್ವಾಮೀಜಿ, ಹೊಸಳ್ಳಿಯ ಬೂದೀಶ್ವರ ಸ್ವಾಮೀಜಿ, ಶಿವಶರಣೆ ನೀಲಮ್ಮ ತಾಯಿ, ಗುದ್ನೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮಾತನಾಡಿ, ಗ್ರಾಮಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. </p>.<p>ಈ ಸಂದರ್ಭದಲ್ಲಿ ವಕೀಲ ಪ್ರಕಾಶ ಅಂಗಡಿ, ಗ್ರಾಮದ ಹಿರಿಯರಾದ ವಿ.ಡಿ.ಅಂದಾನಿಗೌಡ್ರ, ವೆಂಕರಡ್ಡಿ ಹೊಸಮನಿ, ಶಿವಾಜಿ ಮೊಖಾಸಿ, ಶಿವನಗೌಡ ಅಂದಾನಿಗೌಡ್ರ, ವಿನಾಯಕ ಬೋಸ್ಲೆ, ದೊಡ್ಡಫಕ್ಕಿರಪ್ಪ ಗಾಣಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>