<p><strong>ಅಣ್ಣಿಗೇರಿ</strong>: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ನಿರಂತರವಾಗಿ ಓದಿನತ್ತ ಗಮನ ಹರಿಸುವ ಮೂಲಕ ಶೈಕ್ಷಣಿಕ ರಂಗದಲ್ಲಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಹು-ಧಾ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಹೇಳಿದರು.</p>.<p>ಸ್ಥಳೀಯ ಬಾಪೂಜಿ ಶಿಕ್ಷಣ ಸಂಸ್ಥಯಲ್ಲಿ ಭಾನುವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದಲ್ಲಿ ಮಾತನಾಡಿದರು.</p>.<p>ಎಲ್ಲ ವಿದ್ಯಾರ್ಥಿಗಳು ಕೇವಲ ಡಾಕ್ಟರ್, ಎಂಜಿನಿಯರ್, ಶಿಕ್ಷಕರು ಆಗದೇ ಒಬ್ಬ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಂತ ಒಬ್ಬ ಒಳ್ಳೆಯ ರಾಜಕಾರಣಿಯೂ ಸಹ ಆಗಬೇಕು ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ಸಾಕಷ್ಟು ಆರ್ಥಿಕ ತೊಂದರೆಗಳನ್ನು ಅನುಭವಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಬಿಂಬಿಸಲು ಶಿಕ್ಷಣ ಸಂಸ್ಥೆಯನ್ನು ಆರಂಭಿಸಿರುವ ಧಾರವಾಡ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಕೆ.ಐ.ಕೊಂಗಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲನೇ ಹಂತ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮೂಲಕ ಕಲಿತ ಶಾಲೆಗೆ ಮತ್ತು ಪಾಲಕರಿಗೆ ಉತ್ತಮ ಹೆಸರನ್ನು ತರಬೇಕು ಎಂದರು.</p>.<p>ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಎನ್.ಡಿ.ಧಾರವಾಡ ವಹಿಸಿದ್ದರು. </p>.<p>ರಿಜ್ವಾನಾ ಧಾರವಾಡ, ಎಚ್.ಬಿ.ಕರ್ನೂಲ್, ಮಹ್ಮದ ಯೂನೂಸ್, ಶೇಖಅಹ್ಮದ ಶೇಖಸನದಿ, ಶಿವಾನಂದ ಪಟ್ಟೇದ, ದೇವಿಕಾ ಉಮಚಗಿ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ</strong>: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ನಿರಂತರವಾಗಿ ಓದಿನತ್ತ ಗಮನ ಹರಿಸುವ ಮೂಲಕ ಶೈಕ್ಷಣಿಕ ರಂಗದಲ್ಲಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಹು-ಧಾ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಹೇಳಿದರು.</p>.<p>ಸ್ಥಳೀಯ ಬಾಪೂಜಿ ಶಿಕ್ಷಣ ಸಂಸ್ಥಯಲ್ಲಿ ಭಾನುವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದಲ್ಲಿ ಮಾತನಾಡಿದರು.</p>.<p>ಎಲ್ಲ ವಿದ್ಯಾರ್ಥಿಗಳು ಕೇವಲ ಡಾಕ್ಟರ್, ಎಂಜಿನಿಯರ್, ಶಿಕ್ಷಕರು ಆಗದೇ ಒಬ್ಬ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಂತ ಒಬ್ಬ ಒಳ್ಳೆಯ ರಾಜಕಾರಣಿಯೂ ಸಹ ಆಗಬೇಕು ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ಸಾಕಷ್ಟು ಆರ್ಥಿಕ ತೊಂದರೆಗಳನ್ನು ಅನುಭವಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಬಿಂಬಿಸಲು ಶಿಕ್ಷಣ ಸಂಸ್ಥೆಯನ್ನು ಆರಂಭಿಸಿರುವ ಧಾರವಾಡ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಕೆ.ಐ.ಕೊಂಗಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲನೇ ಹಂತ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮೂಲಕ ಕಲಿತ ಶಾಲೆಗೆ ಮತ್ತು ಪಾಲಕರಿಗೆ ಉತ್ತಮ ಹೆಸರನ್ನು ತರಬೇಕು ಎಂದರು.</p>.<p>ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಎನ್.ಡಿ.ಧಾರವಾಡ ವಹಿಸಿದ್ದರು. </p>.<p>ರಿಜ್ವಾನಾ ಧಾರವಾಡ, ಎಚ್.ಬಿ.ಕರ್ನೂಲ್, ಮಹ್ಮದ ಯೂನೂಸ್, ಶೇಖಅಹ್ಮದ ಶೇಖಸನದಿ, ಶಿವಾನಂದ ಪಟ್ಟೇದ, ದೇವಿಕಾ ಉಮಚಗಿ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>