<p><strong>ಹುಬ್ಬಳ್ಳಿ</strong>: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ಗಿರೀಶ ಸಾವಂತ ವಿರುದ್ಧ ನಗರದ ಬೆಂಡಿಗೇರಿ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದೆ.</p><p>ತನ್ನ ಮಗಳಿಂದ ಆರೋಪಿ ಗಿರೀಶ ₹3.30 ಲಕ್ಷ ಮೌಲ್ಯದ ಚಿನ್ನಾಭರಣ, ₹8 ಸಾವಿರ ಪಡೆದುಕೊಂಡು ವಾಪಸ್ ನೀಡಿಲ್ಲ ಎಂದು ವೀರಾಪುರ ಓಣಿಯ ವಿಜಯಲಕ್ಷ್ಮಿ ಮಡಿವಾಳರ ಎಂಬುವರು ದೂರು ನೀಡಿದ್ದಾರೆ.</p><p>ಆರು ತಿಂಗಳ ಹಿಂದೆ ನನ್ನ ಮಗಳು ಟ್ಯೂಷನ್ ಗೆ ಹೋಗುತ್ತಿದ್ದಾಗ ಆತ ಅವಳಿಗೆ ಪರಿಚಯವಾಗಿದ್ದ. ಆಕೆಯೊಂದಿಗೆ ಸಲುಗೆ ಬೆಳೆಸಿದ್ದ ಆತ ತನಗೆ ಹಣದ ಅವಶ್ಯಕತೆ ಇದೆ ಎಂದು ಹೇಳಿ ಆಕೆಯಿಂದ ₹ 8 ಸಾವಿರ ಪಡೆದಿದ್ದ.</p><p>ಅದಾದ ನಂತರ ಮತ್ತೆ ₹90 ಸಾವಿರ ಮೌಲ್ಯದ 15 ಗ್ರಾಂ ತೂಕದ ನೆಕ್ಲೆಸ್, ₹60 ಸಾವಿರ ಮೌಲ್ಯದ 2 ಉಂಗುರ, ₹60 ಸಾವಿರ ಮೌಲ್ಯದ 10 ಗ್ರಾಂ ತೂಕದ ಜೀರಾಮಣಿ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಗೋರಮಾಳ ಸರ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಎರಡು ಜುಮಕಿ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಜಪ್ತಾ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಪದಕ ಸೇರಿದಂತೆ ₹3.30 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದಿದ್ದ. ಅದನ್ನು ವಾಪಸ್ ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ. 16 ವರ್ಷದ ನನ್ನ ಮಗಳು ನಮ್ಮ ಮನೆಯಲ್ಲಿದ್ದ ಚಿನ್ನಾಭರಣ, ನಗದನ್ನು ಆತನಿಗೆ ನೀಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ಗಿರೀಶ ಸಾವಂತ ವಿರುದ್ಧ ನಗರದ ಬೆಂಡಿಗೇರಿ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದೆ.</p><p>ತನ್ನ ಮಗಳಿಂದ ಆರೋಪಿ ಗಿರೀಶ ₹3.30 ಲಕ್ಷ ಮೌಲ್ಯದ ಚಿನ್ನಾಭರಣ, ₹8 ಸಾವಿರ ಪಡೆದುಕೊಂಡು ವಾಪಸ್ ನೀಡಿಲ್ಲ ಎಂದು ವೀರಾಪುರ ಓಣಿಯ ವಿಜಯಲಕ್ಷ್ಮಿ ಮಡಿವಾಳರ ಎಂಬುವರು ದೂರು ನೀಡಿದ್ದಾರೆ.</p><p>ಆರು ತಿಂಗಳ ಹಿಂದೆ ನನ್ನ ಮಗಳು ಟ್ಯೂಷನ್ ಗೆ ಹೋಗುತ್ತಿದ್ದಾಗ ಆತ ಅವಳಿಗೆ ಪರಿಚಯವಾಗಿದ್ದ. ಆಕೆಯೊಂದಿಗೆ ಸಲುಗೆ ಬೆಳೆಸಿದ್ದ ಆತ ತನಗೆ ಹಣದ ಅವಶ್ಯಕತೆ ಇದೆ ಎಂದು ಹೇಳಿ ಆಕೆಯಿಂದ ₹ 8 ಸಾವಿರ ಪಡೆದಿದ್ದ.</p><p>ಅದಾದ ನಂತರ ಮತ್ತೆ ₹90 ಸಾವಿರ ಮೌಲ್ಯದ 15 ಗ್ರಾಂ ತೂಕದ ನೆಕ್ಲೆಸ್, ₹60 ಸಾವಿರ ಮೌಲ್ಯದ 2 ಉಂಗುರ, ₹60 ಸಾವಿರ ಮೌಲ್ಯದ 10 ಗ್ರಾಂ ತೂಕದ ಜೀರಾಮಣಿ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಗೋರಮಾಳ ಸರ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಎರಡು ಜುಮಕಿ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಜಪ್ತಾ, ₹30 ಸಾವಿರ ಮೌಲ್ಯದ 5 ಗ್ರಾಂ ತೂಕದ ಪದಕ ಸೇರಿದಂತೆ ₹3.30 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದಿದ್ದ. ಅದನ್ನು ವಾಪಸ್ ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ. 16 ವರ್ಷದ ನನ್ನ ಮಗಳು ನಮ್ಮ ಮನೆಯಲ್ಲಿದ್ದ ಚಿನ್ನಾಭರಣ, ನಗದನ್ನು ಆತನಿಗೆ ನೀಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>