ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ತಡೆಗೆ ಕಠಿಣ ಕಾನೂನು, ಸಿಎಂ ಜೊತೆ ಚರ್ಚೆ: ಅರವಿಂದ ಬೆಲ್ಲದ

Last Updated 17 ಅಕ್ಟೋಬರ್ 2021, 10:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮತಾಂತರ ತಡೆಗೆ ಕಠಿಣ ಕಾನೂನು ಶೀಘ್ರದಲ್ಲೇ ಜಾರಿಗೆ ತರಬೇಕು ಎಂದು ಈಗಾಗಲೇ ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದೇನೆ. ಈ ಕುರಿತು ಅವರೊಂದಿಗೆ ಮತ್ತೊಂದು ಬಾರಿ ಚರ್ಚಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ನವನಗರ ಎಪಿಎಂಸಿ ಪೊಲೀಸ್ ಠಾಣೆ ಎದುರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಠಿಣ ಕಾಯ್ದೆ ಜಾರಿಯ ರೂಪುರೇಷೆ ಬಗ್ಗೆ ಅನುಭವಿ ವಕೀಲರೊಂದಿಗೆ ಚರ್ಚಿಸಿದ್ದೇನೆ. ಇದರ ವರದಿಯನ್ನು ಸಿಎಂಗೆ ಕೊಡುವೆ ಎಂದರು.

ಧಾರವಾಡ ಜಿಲ್ಲೆಯಲ್ಲಿಯೂ ಮತಾಂತರ ಅವ್ಯಾಹತವಾಗಿ ನಡೆಯುತ್ತಿದೆ. ಭೈರಿದೇವರಕೊಪ್ಪದಲ್ಲಿ ಮತಾಂತರಕ್ಕೆ ಯತ್ನಿಸಿದ ಸೋಮು ಅವರಾಧಿ ಎಂಬಾತನನ್ನು ಬಂಧಿಸಬೇಕು. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸರ ವಿಳಂಬ ಧೋರಣೆ ಸರಿಯಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT