ಅಮರಗೋಳದ ಎಪಿಎಂಸಿ ‘ಎ’ ದರ್ಜೆಯದಾಗಿದ್ದರಿಂದ ಅಧ್ಯಕ್ಷತೆಯ ಗೊಂದಲ ಉಂಟಗಿತ್ತು. ಸಮಸ್ಯೆ ನಿವಾರಿಸುವಂತೆ ಜಿಲ್ಲಾಧಿಕಾರಿಗೆ ಕೋರಲಾಗಿತ್ತು. ಜಿಲ್ಲಾಧಿಕಾರಿ ಎಪಿಎಂಸಿ ನಿರ್ದೇಶಕರಿಗೆ ಪತ್ರ ಬರೆದು ಮಾಹಿತಿ ಪಡೆದುಕೊಂಡರು. ಅಂತಿಮವಾಗಿ ಹುಬ್ಬಳ್ಳಿ ನಗರ ತಹಶೀಲ್ದಾರ್ ಸಭೆಯ ಅಧ್ಯಕ್ಷತೆ ವಹಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.