ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಬೇಕು ಎಂದು ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ಗುರುವಾರ ಪಾಲಿಕೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಬೇಕು ಎಂದು ಸಮಿತಿಯ ಸಂಚಾಲಕ ಹನುಮಂತಸಾ ನಿರಂಜನ ಮನವಿ ಮಾಡಿದರು.
ಹನುಮಂತಸಾ ನಿರಂಜನ ಮಾತನಾಡಿ, ‘ಈದ್ಗಾ ಮೈದಾನವು ಪಾಲಿಕೆಯ ಆಸ್ತಿಯಾಗಿದ್ದು, ಇಲ್ಲಿ ಎಲ್ಲ ಸಮುದಾಯದವರು ಸಾಂಸ್ಕೃತಿ ಆಚರಣೆಗಳನ್ನು ಮಾಡಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ಈಗಾಗಲೇ ನ್ಯಾಯಾಲಯವು ನಿರ್ದೇಶನ ನೀಡಿದೆ. ಎಲ್ಲರೂ ಸೌಹಾರ್ದದಿಂದ ಹಬ್ಬಗಳನ್ನು ಆಚರಣೆ ಮಾಡಲು ಅವಕಾಶ ನೀಡಬೇಕು’ ಎಂದು ಹೇಳಿದರು.