<p><strong>ನವಲಗುಂದ:</strong> ಮಹದಾಯಿ, ಕಳಸಾ-ಬಂಡೂರಿ ಕಾಮಗಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಿಕೊಂಡು ಕಾನೂನು ತೊಡಕು ಬಗೆಹರಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ ಶೆಟ್ಟಿ ಆಗ್ರಹಿಸಿದರು.</p>.<p>ಅವರು ಗುರುವಾರ ಮಹದಾಯಿ–ಕಳಸಾ–ಬಂಡೂರಿ ಜಾರಿ ಹಾಗೂ ಕಪ್ಪತಗುಡ್ಡ ರಕ್ಷಣೆಗಾಗಿ ಆಗ್ರಹಿಸಿ ನರಗುಂದದಿಂದ ಗದಗವರೆಗೆ ಪಾದಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ನವಲಗುಂದ ಪಟ್ಟಣದಲ್ಲಿರುವ ಹುತಾತ್ಮ ರೈತ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಲೋಕಸಭಾ ಚುನಾವಣೆಗೂ ಮುನ್ನ ಮಾತನಾಡಿದಂತೆ ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಮಾಡಲಿ ಎಂದರು.</p>.<p>ಗದಗ ಜಿಲ್ಲೆಯಲ್ಲಿರುವ ಕಪ್ಪತ್ತು ಗುಡ್ಡವನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂದು ಇದೆ ವೇಳೆ ಸರಕಾರಕ್ಕೆ ಒತ್ತಾಯಿಸಿದರು. ಇದಕ್ಕೂ ಮೊದಲು ಪಟ್ಟಣದ ಶೆಟ್ಟರ ಕೆರೆಯಿಂದ ಮಹದಾಯಿ ವೇದಿಕೆವರೆಗೆ ಪಾದಯಾತ್ರೆ ನಡೆಸಿದರು</p>.<p>ಕರವೇ ಪದಾಧಿಕಾರಿಗಳಾದ ಶರಣು ಗದ್ದಗಿ, ಪಾಪು ದಾರೆ, ಮಂಜುನಾಥ ಲೂತಿಮಠ, ಪ್ರವೀಣ ಗಾಯಕವಾಡ, ಪಾಪು ಅಂಬೇಗರ, ಸಚಿನ ಹೋನಕುದರಿ, ಕುಮಾರ ಗುತ್ತೇಪ್ಪನವರ ಅಬ್ದುಲ್ ಕಲೆಗಾರ, ಪ್ರಕಾಶ ಹಿರಗಣ್ಣವ್ವರ ಸೇರಿದಂತೆ ಮಹದಾಯಿ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ರೈತ ಹೋರಾಟಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಮಹದಾಯಿ, ಕಳಸಾ-ಬಂಡೂರಿ ಕಾಮಗಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಿಕೊಂಡು ಕಾನೂನು ತೊಡಕು ಬಗೆಹರಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ ಶೆಟ್ಟಿ ಆಗ್ರಹಿಸಿದರು.</p>.<p>ಅವರು ಗುರುವಾರ ಮಹದಾಯಿ–ಕಳಸಾ–ಬಂಡೂರಿ ಜಾರಿ ಹಾಗೂ ಕಪ್ಪತಗುಡ್ಡ ರಕ್ಷಣೆಗಾಗಿ ಆಗ್ರಹಿಸಿ ನರಗುಂದದಿಂದ ಗದಗವರೆಗೆ ಪಾದಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ನವಲಗುಂದ ಪಟ್ಟಣದಲ್ಲಿರುವ ಹುತಾತ್ಮ ರೈತ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಲೋಕಸಭಾ ಚುನಾವಣೆಗೂ ಮುನ್ನ ಮಾತನಾಡಿದಂತೆ ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಮಾಡಲಿ ಎಂದರು.</p>.<p>ಗದಗ ಜಿಲ್ಲೆಯಲ್ಲಿರುವ ಕಪ್ಪತ್ತು ಗುಡ್ಡವನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂದು ಇದೆ ವೇಳೆ ಸರಕಾರಕ್ಕೆ ಒತ್ತಾಯಿಸಿದರು. ಇದಕ್ಕೂ ಮೊದಲು ಪಟ್ಟಣದ ಶೆಟ್ಟರ ಕೆರೆಯಿಂದ ಮಹದಾಯಿ ವೇದಿಕೆವರೆಗೆ ಪಾದಯಾತ್ರೆ ನಡೆಸಿದರು</p>.<p>ಕರವೇ ಪದಾಧಿಕಾರಿಗಳಾದ ಶರಣು ಗದ್ದಗಿ, ಪಾಪು ದಾರೆ, ಮಂಜುನಾಥ ಲೂತಿಮಠ, ಪ್ರವೀಣ ಗಾಯಕವಾಡ, ಪಾಪು ಅಂಬೇಗರ, ಸಚಿನ ಹೋನಕುದರಿ, ಕುಮಾರ ಗುತ್ತೇಪ್ಪನವರ ಅಬ್ದುಲ್ ಕಲೆಗಾರ, ಪ್ರಕಾಶ ಹಿರಗಣ್ಣವ್ವರ ಸೇರಿದಂತೆ ಮಹದಾಯಿ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ರೈತ ಹೋರಾಟಗಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>