‘ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಯಾರೇ ಇರಲಿ; ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುತ್ತಿದ್ದರು. ಸಚಿವ, ಶಾಸಕ ಒಂದಲ್ಲ ಒಂದು ದಿನ ಮಾಜಿ ಆಗುತ್ತಾರೆ. ಕಾರ್ಯಕರ್ತ ಯಾವತ್ತೂ ಮಾಜಿ ಆಗುವುದಿಲ್ಲ. ಆದ್ದರಿಂದ ಈ ಪದಕ್ಕೆ ದೊಡ್ಡ ಬೆಲೆಯಿದೆ ಎನ್ನುತ್ತಿದ್ದರು. ತಳಮಟ್ಟದಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದರಿಂದ ಬಿಜೆಪಿ ಈ ಭಾಗದಲ್ಲಿ ಗಟ್ಟಿಯಾಗಿ ನೆಲೆಯೂರಲು ಸಾಧ್ಯವಾಯಿತು’ ಎಂದು ಚೆದುರಿ ಹೋಗಿದ್ದ ನೆನಪುಗಳನ್ನು ಅವರು ಒಂದುಗೂಡಿಸಿದರು.