ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರ ಪಾದಪೂಜೆ ಮಾಡಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ

Last Updated 2 ಅಕ್ಟೋಬರ್ 2022, 21:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ಗಾಮನಗಟ್ಟಿಯಲ್ಲಿ ಬಿಜೆಪಿ ಮಹಾನಗರ ಘಟಕದ ಯುವ ಮೋರ್ಚಾ ಭಾನುವಾರ ಹಮ್ಮಿಕೊಂಡಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು, ಪೌರ ಕಾರ್ಮಿಕರ ಪಾದಪೂಜೆಮಾಡಿದರು.

ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು 50ಕ್ಕೂ ಕಾರ್ಮಿಕರ ಪಾದಪೂಜೆ ನೆರವೇರಿಸಿದ ಅವರು, ‘ಪೌರ ಕಾರ್ಮಿಕರು ಮಳೆ, ಗಾಳಿ ಹಾಗೂ ಮಳೆ ಬಿಸಿಲೆನ್ನದೆ ಪ್ರತಿದಿನ ಮಹಾನಗರವನ್ನು ಸ್ವಚ್ಛವಾಗಿರಿಸುತ್ತಾರೆ. ಅವರ ಪಾದ ಪೂಜೆ ಮಾಡಿ ಈ ದಿನವನ್ನು ವಿಶೇಷವಾಗಿ ಆಚರಿಸಿದ್ದಕ್ಕೆ ಖುಷಿಯಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT