<p><strong>ಧಾರವಾಡ:</strong> ‘ವಿಜ್ಞಾನ ಮತ್ತು ತಂತ್ರಜ್ಞಾನದ ಅವಿಷ್ಕಾರ ಮತ್ತು ನವ ಪರಿಕರಗಳನ್ನು ಬಳಸಿಕೊಂಡು ಸೌಹಾರ್ದದ ಬದುಕು ರೂಪಿಸಿಕೊಳ್ಳುವ ಕುರಿತು ಅರಿವು ಮೂಡಿಸುವುದು ಶಿಕ್ಷಣದ ಕಾರ್ಯ. ಶಿಕ್ಷಕರು ತಮ್ಮ ಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು’ ಎಂದು ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಹೇಳಿದರು.</p>.<p>ಸಾಧನಕೇರಿಯಲ್ಲಿ ಭಾನುವಾರ ನಡೆದ ‘ಮೈಂಡ್ವೇವ್ ಎಡ್ಯು ಹಬ್’ (ಎಂಇಎಚ್) ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ‘ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಸಮಸ್ಯೆಯನ್ನು ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>‘ಮನುಷ್ಯ ಕುತೂಹಲ ಬೆಳೆಸಿಕೊಳ್ಳಬೇಕು. ಕಲಿಕೆ ನಿರಂತರವಾಗಿರಬೇಕು. ಕ್ಷಮತೆ ಮೀರಿ ಕೆಲಸ ಮಾಡುವುದನ್ನು ಕಲಿಯಬೇಕು’ ಎಂದು ಹೇಳಿದರು.</p>.<p>ಪ್ರೊ.ಎಸ್.ಎಂ.ಶಿವಪ್ರಸಾದ್ ಮಾತನಾಡಿ, 21ನೇ ಶತಮಾನದ ಡಿಜಿಟಲ್ ಯುಗದಲ್ಲಿ ಗುಣಮಟ್ಟದ ಸವಾಲು ಪ್ರಮುಖವಾಗಿದೆ. ಶಿಕ್ಷಕರ ಸಾಮರ್ಥ್ಯ ವೃದ್ಧಿ, ಅವರಿಗೆ ಕೌಶಲಗಳನ್ನು ಕಲಿಸುವ, ಹೊಸ ವಿಷಯಗಳು ಮತ್ತು ತಂತ್ರಜ್ಞಾನಗಳನ್ನು ತಿಳಿಸುವ ಉದ್ದೇಶದಿಂದ ಕೇಂದ್ರ ಸ್ಥಾಪಿಸಲಾಗಿದೆ’ ಎಂದರು.</p>.<p>ಎಂಇಎಚ್ನ ಸುಭಾಷ್ ಪಾಟೀಲ, ಮಹೇಶ್ ಮಾಶಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ವಿಜ್ಞಾನ ಮತ್ತು ತಂತ್ರಜ್ಞಾನದ ಅವಿಷ್ಕಾರ ಮತ್ತು ನವ ಪರಿಕರಗಳನ್ನು ಬಳಸಿಕೊಂಡು ಸೌಹಾರ್ದದ ಬದುಕು ರೂಪಿಸಿಕೊಳ್ಳುವ ಕುರಿತು ಅರಿವು ಮೂಡಿಸುವುದು ಶಿಕ್ಷಣದ ಕಾರ್ಯ. ಶಿಕ್ಷಕರು ತಮ್ಮ ಜ್ಞಾನದ ಮೂಲಕ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು’ ಎಂದು ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಹೇಳಿದರು.</p>.<p>ಸಾಧನಕೇರಿಯಲ್ಲಿ ಭಾನುವಾರ ನಡೆದ ‘ಮೈಂಡ್ವೇವ್ ಎಡ್ಯು ಹಬ್’ (ಎಂಇಎಚ್) ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ‘ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಸಮಸ್ಯೆಯನ್ನು ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>‘ಮನುಷ್ಯ ಕುತೂಹಲ ಬೆಳೆಸಿಕೊಳ್ಳಬೇಕು. ಕಲಿಕೆ ನಿರಂತರವಾಗಿರಬೇಕು. ಕ್ಷಮತೆ ಮೀರಿ ಕೆಲಸ ಮಾಡುವುದನ್ನು ಕಲಿಯಬೇಕು’ ಎಂದು ಹೇಳಿದರು.</p>.<p>ಪ್ರೊ.ಎಸ್.ಎಂ.ಶಿವಪ್ರಸಾದ್ ಮಾತನಾಡಿ, 21ನೇ ಶತಮಾನದ ಡಿಜಿಟಲ್ ಯುಗದಲ್ಲಿ ಗುಣಮಟ್ಟದ ಸವಾಲು ಪ್ರಮುಖವಾಗಿದೆ. ಶಿಕ್ಷಕರ ಸಾಮರ್ಥ್ಯ ವೃದ್ಧಿ, ಅವರಿಗೆ ಕೌಶಲಗಳನ್ನು ಕಲಿಸುವ, ಹೊಸ ವಿಷಯಗಳು ಮತ್ತು ತಂತ್ರಜ್ಞಾನಗಳನ್ನು ತಿಳಿಸುವ ಉದ್ದೇಶದಿಂದ ಕೇಂದ್ರ ಸ್ಥಾಪಿಸಲಾಗಿದೆ’ ಎಂದರು.</p>.<p>ಎಂಇಎಚ್ನ ಸುಭಾಷ್ ಪಾಟೀಲ, ಮಹೇಶ್ ಮಾಶಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>