ಹುಬ್ಬಳ್ಳಿ: ಪ್ರತಿ ತಿಂಗಳ ಗೌರವ ಧನವನ್ನು ₹12 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಆರೋಗ್ಯ ಕೆಲಸ ಸ್ಥಗಿತಗೊಳಿಸಿ ಕಾರ್ಯಕರ್ತೆ ಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ ಅಗತ್ಯ ರಕ್ಷಣಾ ಸಾಧನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಚಪ್ಪಾಳೆ ತಟ್ಡುವ ಮೂಲಕ ಗೌರವ ಸಲ್ಲಿಸುತ್ತಿರುವುದು ಸಂತಸ ತಂದಿದೆ. ಆದರೆ, ಜೀವ ಪಣಕ್ಕಿಟ್ಡು ಕೆಲಸ ಮಾಡುವ ನಮಗೆ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾಗಿದೆ ಎಂದು ದೂರಿದರು.