ಹುಬ್ಬಳ್ಳಿ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಸ್ವಪ್ರತಿಷ್ಠೆ ರಾಜಕೀಯದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಇದರಿಂದಾಗಿ, ಪರ್ಯಾಯ ವ್ಯವಸ್ಥೆ ಬಗ್ಗೆ ಜನ ಒಲವು ತೋರುತ್ತಿದ್ದಾರೆ. ಹಾಗಾಗಿ, ಆಮ್ ಆದ್ಮಿ ಪಕ್ಷ ಈ ಬಾರಿ ಪಂಜಾಬ್ ಮಾದರಿಯಲ್ಲಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದರು.