<p><strong>ಹುಬ್ಬಳ್ಳಿ</strong>: ರಾಜ್ಯದ ಕೈಗಾರಿಕೋದ್ಯಮಿಗಳ ಮತ್ತು ಎಪಿಎಂಸಿ ವರ್ತಕರ ಆಸ್ತಿಗಳ ಆಸ್ತಿ ತೆರಿಗೆಗೆ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಭರವಸೆ ನೀಡಿದರು.</p>.<p>ಈ ಕುರಿತು ಚರ್ಚಿಸಲು ಗುರುವಾರ ಬೆಂಗಳೂರಿನಲ್ಲಿ ನಡೆದ 30 ಜಿಲ್ಲೆಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ಅಧ್ಯಕ್ಷ ಮಹೇಂದ್ರ ಲದ್ದಡ, ಇಲ್ಲಿನ ಎಪಿಎಂಸಿಯ ವ್ಯಾಪಾರಸ್ಥರ ಸಂಘದವರು ಮನವಿ ಸಲ್ಲಿಸಿದರು.</p>.<p>2020-21ನೇ ಸಾಲಿನಲ್ಲಿ ಇದ್ದ ಆಸ್ತಿ ಕರದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಿ ಅದನ್ನೇ ಮುಂದುವರಿಸಬೇಕು. ರಿಯಾಯಿತಿಯೊಂದಿಗೆ ಕರ ಪಾವತಿಸುವ ಅವಧಿಯನ್ನು ಜು. 31ರ ಬದಲಾಗಿ ನವೆಂಬರ್ 30 ರ ತನಕ ವಿಸ್ತರಿಸಬೇಕು. ಹೊಸ ಆಸ್ತಿಕರ ತಿದ್ದುಪಡಿ ಕಾಯ್ದೆಯನ್ನು ಎರಡು ವರ್ಷಗಳ ಕಾಲ ಮುಂದೂಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.</p>.<p>ಮನವಿ ಆಲಿಸಿದ ಸಚಿವರು 15 ದಿನಗಳ ಒಳಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ಪ್ರತಿನಿಧಿಗಳು ತಿಳಿಸಿದರು.</p>.<p>ಸಭೆಯಲ್ಲಿ ಸಂಸ್ಥೆ ಉಪಾಧ್ಯಕ್ಷ ವಿನಯ ಜೆ.ಜವಳಿ, ಗೌರವ ಕಾರ್ಯದರ್ಶಿ ಅಶೋಕ ಗಡಾದ, ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ, ಎಪಿಎಂಸಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಯಕಲಾಸಪುರ, ಉಪಾಧ್ಯಕ್ಷ ಶಂಕರ ನೇಗಿನಹಾಳ, ಗೌರವ ಕಾರ್ಯದರ್ಶಿ ಪ್ರಭುಲಿಂಗಪ್ಪ ಅಂಕಲಕೋಟಿ ಸೇರಿದಂತೆ ಹಲವು ವ್ಯಾಪಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ರಾಜ್ಯದ ಕೈಗಾರಿಕೋದ್ಯಮಿಗಳ ಮತ್ತು ಎಪಿಎಂಸಿ ವರ್ತಕರ ಆಸ್ತಿಗಳ ಆಸ್ತಿ ತೆರಿಗೆಗೆ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಭರವಸೆ ನೀಡಿದರು.</p>.<p>ಈ ಕುರಿತು ಚರ್ಚಿಸಲು ಗುರುವಾರ ಬೆಂಗಳೂರಿನಲ್ಲಿ ನಡೆದ 30 ಜಿಲ್ಲೆಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ಅಧ್ಯಕ್ಷ ಮಹೇಂದ್ರ ಲದ್ದಡ, ಇಲ್ಲಿನ ಎಪಿಎಂಸಿಯ ವ್ಯಾಪಾರಸ್ಥರ ಸಂಘದವರು ಮನವಿ ಸಲ್ಲಿಸಿದರು.</p>.<p>2020-21ನೇ ಸಾಲಿನಲ್ಲಿ ಇದ್ದ ಆಸ್ತಿ ಕರದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಿ ಅದನ್ನೇ ಮುಂದುವರಿಸಬೇಕು. ರಿಯಾಯಿತಿಯೊಂದಿಗೆ ಕರ ಪಾವತಿಸುವ ಅವಧಿಯನ್ನು ಜು. 31ರ ಬದಲಾಗಿ ನವೆಂಬರ್ 30 ರ ತನಕ ವಿಸ್ತರಿಸಬೇಕು. ಹೊಸ ಆಸ್ತಿಕರ ತಿದ್ದುಪಡಿ ಕಾಯ್ದೆಯನ್ನು ಎರಡು ವರ್ಷಗಳ ಕಾಲ ಮುಂದೂಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.</p>.<p>ಮನವಿ ಆಲಿಸಿದ ಸಚಿವರು 15 ದಿನಗಳ ಒಳಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ಪ್ರತಿನಿಧಿಗಳು ತಿಳಿಸಿದರು.</p>.<p>ಸಭೆಯಲ್ಲಿ ಸಂಸ್ಥೆ ಉಪಾಧ್ಯಕ್ಷ ವಿನಯ ಜೆ.ಜವಳಿ, ಗೌರವ ಕಾರ್ಯದರ್ಶಿ ಅಶೋಕ ಗಡಾದ, ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ, ಎಪಿಎಂಸಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಯಕಲಾಸಪುರ, ಉಪಾಧ್ಯಕ್ಷ ಶಂಕರ ನೇಗಿನಹಾಳ, ಗೌರವ ಕಾರ್ಯದರ್ಶಿ ಪ್ರಭುಲಿಂಗಪ್ಪ ಅಂಕಲಕೋಟಿ ಸೇರಿದಂತೆ ಹಲವು ವ್ಯಾಪಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>