ಸಮತಾ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಮಾತನಾಡಿ, ‘ರೈಲ್ವೆ ಪೊಲೀಸರು ಪುತ್ಥಳಿ ತೆರವುಗೊಳಿಸುವ ಉದ್ದೇಶದಿಂದಲೇ ಸ್ಥಳಕ್ಕೆ ಜೆಸಿಬಿ ಯಂತ್ರವನ್ನು ತಂದಿದ್ದಾರೆ. ತೆರವು ಕಾರ್ಯಕ್ಕೆ ಹಿಂದೆಯೂ ತೀವ್ರ ವಿರೋಧ ವ್ಯಕ್ತಪಡಿಸಿದ್ದೇವೆ. ಆಗ ಮಣಿದಿದ್ದ ಪೊಲೀಸರು ಈಗ ಮತ್ತೆ ತೆರವು ಕಾರ್ಯಕ್ಕೆ ಮುಂದಾಗಿರುವುದು ಖಂಡನೀಯ’ ಎಂದು ತಿಳಿಸಿದರು.