ಹುಬ್ಬಳ್ಳಿ: ಆಟೊ ನಿಲ್ಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಆಟೊ ಚಾಲಕನೊಬ್ಬ ಇನ್ನೊಬ್ಬ ಆಟೊ ಚಾಲಕನ ಜತೆ ಜಗಳ ಮಾಡಿ ಆತನಿಗೆ ಚಾಕುವಿನಿಂದ ಇರಿದ ಘಟನೆ ಇಲ್ಲಿನ ಹಳೆ ಹುಬ್ಬಳ್ಳಿಯ ಸದಾಶಿವನಗರದ ಎರಡನೇ ಕ್ರಾಸ್ ನಲ್ಲಿ ನಡೆದಿದೆ.
ಜಾಕೀರ ಅವರು ಶನಿವಾರ ರಾತ್ರಿ ಸದಾಶಿವನಗರದ ತಮ್ಮ ಮನೆ ಬಳಿ ಆಟೊ ನಿಲ್ಲಿಸುತ್ತಿದ್ದ ವೇಳೆ ವೇಗವಾಗಿ ಆಟೊ ಚಾಲನೆ ಮಾಡಿಕೊಂಡು ಬಂದ ಆರೋಪಿ ನದೀಮ ಖವಾಸ ಜಾಕೀರ ಅವರ ಕಾಲಿನ ಮೇಲೆ ಆಟೊ ಹಾಯಿಸಿದ್ದಾನೆ.
ಇದನ್ನು ಪ್ರಶ್ನಿಸಿದ್ದಕ್ಕೆ ಜಾಕೀರ್ ಮತ್ತು ಆತನ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ನಂತರ ಜಾಕೀರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಕೀರ್ ಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.