ಮಂಗಳೂರು: ರಸ್ತೆ, ಮೋರಿ ಮತ್ತಿತರ ಕಾಮಗಾರಿಗಳನ್ನು ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ₹ 35,000 ಲಂಚ ಪಡೆಯುತ್ತಿದ್ದ ಇಲ್ಲಿನ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸೆಬಾಸ್ಟಿಯನ್ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.