<p><strong>ಧಾರವಾಡ</strong>: ‘ಹಲವು ರಾಜಕಾರಣಿಗಳು ಸಭೆ ಸಮಾರಂಭಗಳಲ್ಲಿ ಪುಂಖಾನುಪುಂಖವಾಗಿ ಮಾತನಾಡಿ ಚಪ್ಪಾಳೆ ಗಿಟ್ಟಿಸುತ್ತಾರೆ. ಆದರೆ, ಮಾತಿನಂತೆ ಅವರ ಕೃತಿ ಇರುವುದಿಲ್ಲ’ ಎಂದು ಸಾಹಿತಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದರು.</p>.<p>ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಂಗಣದಲ್ಲಿ ಸಂ.ಶಿ.ಭೂಸನೂರಮಠ ಪ್ರತಿಷ್ಠಾನ ಹಾಗೂ ಕಲ್ಯಾಣಕೂಟದ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಂ.ಶಿ. ಭೂಸನೂರಮಠ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮಾತುಗಳಿಂದ ಸಮಾಜದ ಪ್ರಗತಿ ಸಾಧ್ಯ ಇಲ್ಲ. ಮಾತುಗಳು ಕಾರ್ಯಗತವಾದಾಗ ಪ್ರಗತಿ ಸಾಧ್ಯವಾಗುತ್ತದೆ. ಸಮಾಜಮುಖಿಯಾಗಿ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವವರು ಕಡಿಮೆಯಾಗುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ವಚನಕಾರ್ತಿ ಅಕ್ಕಮಹಾದೇವಿ ಅವರ ಊರು ಉಡುತಡಿ ಅಭಿವೃದ್ಧಿಗೆ ಭೂಸನೂರಮಠ ಸಾಹಿತ್ಯ ಪ್ರಶಸ್ತಿಯ ಮೊತ್ತವನ್ನು ಅಕ್ಕಮಹಾದೇವಿ ಪ್ರತಿಷ್ಠಾನಕ್ಕೆ ನೀಡುತ್ತೇನೆ ಎಂದರು.</p>.<p>ವಿಶ್ರಾಂತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ.ವಡ್ಡೀನ ಅವರನ್ನು ಸನ್ಮಾನಿಸಲಾಯಿತು.</p>.<p>ಸಾಹಿತಿ ಬಸವರಾಜ ಜಗಜಂಪಿ ಅವರು ಸಂ. ಶಿ. ಭೂಸನೂರಮಠ ಅವರ ‘ಭವ್ಯಮಾನವ’ ಮಹಾಕಾವ್ಯದ ಕುರಿತು ಉಪನ್ಯಾಸ ನೀಡಿದರು.</p>.<p>ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂ.ಶಿ.ಭೂಸನೂರಮಠ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ಗುರುದೇವಿ ಹುಲ್ಲೆಪ್ಪನವರಮಠ, ಪ್ರತಿಷ್ಠಾನದ ಕಾರ್ಯದರ್ಶಿ ಶಶಿಧರ ತೋಡಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಹಲವು ರಾಜಕಾರಣಿಗಳು ಸಭೆ ಸಮಾರಂಭಗಳಲ್ಲಿ ಪುಂಖಾನುಪುಂಖವಾಗಿ ಮಾತನಾಡಿ ಚಪ್ಪಾಳೆ ಗಿಟ್ಟಿಸುತ್ತಾರೆ. ಆದರೆ, ಮಾತಿನಂತೆ ಅವರ ಕೃತಿ ಇರುವುದಿಲ್ಲ’ ಎಂದು ಸಾಹಿತಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದರು.</p>.<p>ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಂಗಣದಲ್ಲಿ ಸಂ.ಶಿ.ಭೂಸನೂರಮಠ ಪ್ರತಿಷ್ಠಾನ ಹಾಗೂ ಕಲ್ಯಾಣಕೂಟದ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಂ.ಶಿ. ಭೂಸನೂರಮಠ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮಾತುಗಳಿಂದ ಸಮಾಜದ ಪ್ರಗತಿ ಸಾಧ್ಯ ಇಲ್ಲ. ಮಾತುಗಳು ಕಾರ್ಯಗತವಾದಾಗ ಪ್ರಗತಿ ಸಾಧ್ಯವಾಗುತ್ತದೆ. ಸಮಾಜಮುಖಿಯಾಗಿ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವವರು ಕಡಿಮೆಯಾಗುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ವಚನಕಾರ್ತಿ ಅಕ್ಕಮಹಾದೇವಿ ಅವರ ಊರು ಉಡುತಡಿ ಅಭಿವೃದ್ಧಿಗೆ ಭೂಸನೂರಮಠ ಸಾಹಿತ್ಯ ಪ್ರಶಸ್ತಿಯ ಮೊತ್ತವನ್ನು ಅಕ್ಕಮಹಾದೇವಿ ಪ್ರತಿಷ್ಠಾನಕ್ಕೆ ನೀಡುತ್ತೇನೆ ಎಂದರು.</p>.<p>ವಿಶ್ರಾಂತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ.ವಡ್ಡೀನ ಅವರನ್ನು ಸನ್ಮಾನಿಸಲಾಯಿತು.</p>.<p>ಸಾಹಿತಿ ಬಸವರಾಜ ಜಗಜಂಪಿ ಅವರು ಸಂ. ಶಿ. ಭೂಸನೂರಮಠ ಅವರ ‘ಭವ್ಯಮಾನವ’ ಮಹಾಕಾವ್ಯದ ಕುರಿತು ಉಪನ್ಯಾಸ ನೀಡಿದರು.</p>.<p>ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂ.ಶಿ.ಭೂಸನೂರಮಠ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ಗುರುದೇವಿ ಹುಲ್ಲೆಪ್ಪನವರಮಠ, ಪ್ರತಿಷ್ಠಾನದ ಕಾರ್ಯದರ್ಶಿ ಶಶಿಧರ ತೋಡಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>