<p><strong>ಹುಬ್ಬಳ್ಳಿ:</strong> ವಿವಿಧ ಪ್ರಕಾರದ ನೃತ್ಯಕಲೆಗಳಿಂದ ಉತ್ತಮ ರೀತಿಯಲ್ಲಿ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ನೃತ್ಯ ತಜ್ಞೆ ದೀಪ್ತಿ ಹಸಬಿ ತಿಳಿಸಿದರು.</p>.<p>‘ನೃತ್ಯ ಚಿಕಿತ್ಸೆ’ ಕುರಿತು ಇಲ್ಲಿನ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೆ. ವಿಜ್ಞಾನ ಸಂಸ್ಥೆಯ ಮನಶಾಸ್ತ್ರ ವಿಭಾಗ ವಿಭಾಗ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.</p>.<p>‘ನೃತ್ಯ ಕಲಿಕೆಯು ಆರೋಗ್ಯ ರಕ್ಷಣೆಗೆ ಪೂರಕವಾಗುತ್ತದೆ. ಇದರಲ್ಲಿ ಚಿಕಿತ್ಸಾ ಗುಣಗಳಿದ್ದು, ಅವುಗಳನ್ನು ತಿಳಿಪಡಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು’ ಎಂದರು.</p>.<p>ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ ಜೆ. ಹಾನಗಲ್, ಮನಶಾಸ್ತ್ರ ಸಂಘದ ಅಧ್ಯಕ್ಷೆ ಮೈಥಿಲಿ ನರಗುಂದ, ಪ್ರಾಚಾರ್ಯರಾದ ಸುಮಂಗಲಾ ಬಿ. ಪಾಟೀಲ, ಪಿಯುಸಿ ಕಾಲೇಜಿನ ಪ್ರಾಚಾರ್ಯರಾದ ನಿರ್ಮಲಾ ಅಣ್ಣಿಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವಿವಿಧ ಪ್ರಕಾರದ ನೃತ್ಯಕಲೆಗಳಿಂದ ಉತ್ತಮ ರೀತಿಯಲ್ಲಿ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ನೃತ್ಯ ತಜ್ಞೆ ದೀಪ್ತಿ ಹಸಬಿ ತಿಳಿಸಿದರು.</p>.<p>‘ನೃತ್ಯ ಚಿಕಿತ್ಸೆ’ ಕುರಿತು ಇಲ್ಲಿನ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೆ. ವಿಜ್ಞಾನ ಸಂಸ್ಥೆಯ ಮನಶಾಸ್ತ್ರ ವಿಭಾಗ ವಿಭಾಗ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.</p>.<p>‘ನೃತ್ಯ ಕಲಿಕೆಯು ಆರೋಗ್ಯ ರಕ್ಷಣೆಗೆ ಪೂರಕವಾಗುತ್ತದೆ. ಇದರಲ್ಲಿ ಚಿಕಿತ್ಸಾ ಗುಣಗಳಿದ್ದು, ಅವುಗಳನ್ನು ತಿಳಿಪಡಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು’ ಎಂದರು.</p>.<p>ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ ಜೆ. ಹಾನಗಲ್, ಮನಶಾಸ್ತ್ರ ಸಂಘದ ಅಧ್ಯಕ್ಷೆ ಮೈಥಿಲಿ ನರಗುಂದ, ಪ್ರಾಚಾರ್ಯರಾದ ಸುಮಂಗಲಾ ಬಿ. ಪಾಟೀಲ, ಪಿಯುಸಿ ಕಾಲೇಜಿನ ಪ್ರಾಚಾರ್ಯರಾದ ನಿರ್ಮಲಾ ಅಣ್ಣಿಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>