ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ ತಾಲ್ಲೂಕುಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಮುಖ ಬಡಾವಣೆಗಳು ಮತ್ತು ವ್ಯಾಪಾರಿಗಳ ಬಳಿ ತೆರಳಿ ಜಾಗೃತಿ ಮೂಡಿಸಿದರು. ಸೋಂಕು ಹರಡುವುದನ್ನು ತಪ್ಪಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಅಗತ್ಯ. ಎಲ್ಲೆಂದರಲ್ಲಿ ಉಗುಳುವುದನ್ನು ಬಿಡಬೇಕು, ಗುಂಪು ಸೇರಬಾರದು’ ಎಂದು ಜಾಗೃತಿ ಮೂಡಿದರು.