<p><strong>ಅಳ್ನಾವರ</strong>: ಪಟ್ಟಣದಲ್ಲಿ ರಸ್ತೆ ಬದಿ ಎಲ್ಲೆಂದರಲ್ಲಿ ಜನರು ಕಸ ಸುರಿಯುವುದನ್ನು ತಡೆಯಲು ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಸ ಹಾಕುವ ಸ್ಥಳಗಳಲ್ಲಿ ರಂಗೋಲಿ ಬಿಡಿಸುವ ಮೂಲಕ ಜಾಗೃತಿ ಮೂಡಿಸಿದರು.</p>.<p>‘ಪಟ್ಟಣದಲ್ಲಿ ಪ್ರತಿ ಮನೆಗಳಿಂದಲೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಸ ಸಂಗ್ರಹ ಮಾಡುತ್ತಾರೆ. ಆದರೂ ಜನರು ರಸ್ತೆಯ ಬದಿ ಕಸ ಹಾಕಿ ಪರಿಸರ ಹಾಳು ಮಾಡುತ್ತಿದ್ದಾರೆ. ಇದರಿಂದ ಪಟ್ಟಣದ ಅಂದ ಹಾಳಾಗುತ್ತಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಭಾಕರ ದೊಡಮನಿ ಹೇಳಿದರು.</p>.<p>‘ಸ್ವಚ್ಛ ಪಟ್ಟಣಕ್ಕೆ ಜನರ ಸಹಕಾರವೂ ಅಗತ್ಯ. ಇಲ್ಲದಿದ್ದರೆ ಸ್ವಚ್ಛ ಭಾರತ ನಿರ್ಮಾಣ ಕನಸಾಗಿಯೇ ಉಳಿಯುತ್ತದೆ. ಜನರು ಹಸಿ, ಒಣ ಕಸವನ್ನು ಬೇರ್ಪಡಿಸಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಸ ಸಂಗ್ರಹ ಮಾಡಲು ಬಂದಾಗ ನೀಡಬೇಕು’ ಎಂದರು.</p>.<p>‘ಅಂಗಡಿ, ಹೋಟೆಲ್ಗಳಲ್ಲಿನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕದಂತೆ ವ್ಯಾಪಾರಿಗಳಿಗೆ ತಿಳಿವಳಿಕೆ ಮೂಡಿಸಲಾಗಿದೆ. ಇದು ಮುಂದುವರಿದರೆ ಅಂಗಡಿಗಳ ಪರವಾನಗಿ ರದ್ದುಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸ್ವಚ್ಛತೆಗೆ ತಗುಲುವ ವೆಚ್ಚವನ್ನು ಅವರಿಂದಲೇ ಭರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ</strong>: ಪಟ್ಟಣದಲ್ಲಿ ರಸ್ತೆ ಬದಿ ಎಲ್ಲೆಂದರಲ್ಲಿ ಜನರು ಕಸ ಸುರಿಯುವುದನ್ನು ತಡೆಯಲು ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಸ ಹಾಕುವ ಸ್ಥಳಗಳಲ್ಲಿ ರಂಗೋಲಿ ಬಿಡಿಸುವ ಮೂಲಕ ಜಾಗೃತಿ ಮೂಡಿಸಿದರು.</p>.<p>‘ಪಟ್ಟಣದಲ್ಲಿ ಪ್ರತಿ ಮನೆಗಳಿಂದಲೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಸ ಸಂಗ್ರಹ ಮಾಡುತ್ತಾರೆ. ಆದರೂ ಜನರು ರಸ್ತೆಯ ಬದಿ ಕಸ ಹಾಕಿ ಪರಿಸರ ಹಾಳು ಮಾಡುತ್ತಿದ್ದಾರೆ. ಇದರಿಂದ ಪಟ್ಟಣದ ಅಂದ ಹಾಳಾಗುತ್ತಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಭಾಕರ ದೊಡಮನಿ ಹೇಳಿದರು.</p>.<p>‘ಸ್ವಚ್ಛ ಪಟ್ಟಣಕ್ಕೆ ಜನರ ಸಹಕಾರವೂ ಅಗತ್ಯ. ಇಲ್ಲದಿದ್ದರೆ ಸ್ವಚ್ಛ ಭಾರತ ನಿರ್ಮಾಣ ಕನಸಾಗಿಯೇ ಉಳಿಯುತ್ತದೆ. ಜನರು ಹಸಿ, ಒಣ ಕಸವನ್ನು ಬೇರ್ಪಡಿಸಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ಕಸ ಸಂಗ್ರಹ ಮಾಡಲು ಬಂದಾಗ ನೀಡಬೇಕು’ ಎಂದರು.</p>.<p>‘ಅಂಗಡಿ, ಹೋಟೆಲ್ಗಳಲ್ಲಿನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕದಂತೆ ವ್ಯಾಪಾರಿಗಳಿಗೆ ತಿಳಿವಳಿಕೆ ಮೂಡಿಸಲಾಗಿದೆ. ಇದು ಮುಂದುವರಿದರೆ ಅಂಗಡಿಗಳ ಪರವಾನಗಿ ರದ್ದುಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸ್ವಚ್ಛತೆಗೆ ತಗುಲುವ ವೆಚ್ಚವನ್ನು ಅವರಿಂದಲೇ ಭರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>