ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಮಸೀದಿ ಎರಡೂ ನಿರ್ಮಾಣವಾಗಲಿ. ಇದಕ್ಕೆ ವಿರೋಧವಿಲ್ಲ ಎಂದು ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಯೋಧ್ಯೆ ವಿಚಾರವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಈ ಬಾರಿ ಸಫಲವಾಗುವ ಆಶಯ ಇದೆ ಎಂದರು.
’ಅಯೋಧ್ಯೆಯಲ್ಲಿ ರಾಮಮಂದಿರ, ಮಸೀದಿ ಅಕ್ಕಪಕ್ಕದಲ್ಲಿ ನಿರ್ಮಾಣ ಬೇಡ, ಸ್ವಲ್ಪ ದೂರ, ದೂರದಲ್ಲಿ ನಿರ್ಮಾಣವಾಗಲಿ’ ಎಂದು ಅವರು ಸಲಹೆ ನೀಡಿದರು. ಯಾವುದೇ ಸಂಘರ್ಷ ಇಲ್ಲದೆ ವಿವಾದ ಬಗೆ ಹರಿಯಲಿ ಎಂದು ಆಶಯ ವ್ಯಕ್ತಪಡಿಸಿದರು.