ಈ ಕುರಿತು ಪ್ರತಿಕ್ರಿಯಿಸಿದ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, 'ಮಗುವಿನ ಬಾಯಲ್ಲಿ ಗಂಟು ದೊಡ್ಡದಾಗಿತ್ತು. ನಮ್ಮ ವೈದ್ಯರಾದ ರಾಜಶೇಖರ ಅವರು ಪರೀಕ್ಷೆಗೆ ಒಳಪಡಿಸಿ, ಅದನ್ನು ರಕ್ತನಾಳ ಗಂಟು ಎಂದು ಪತ್ತೆ ಹಚ್ಚಿದ್ದರು. ಅದಕ್ಕೆ ಪ್ರಾಥಮಿಕ ಚಿಕಿತ್ಸೆ ಎಂದು ಒಂದು ಇಂಜೆಕ್ಸನ್ ಮಾಡಲಾಗಿತ್ತು. ಆಗ ಅಧಿಕ ರಕ್ತಸ್ರಾವ ಆಗಿದೆ. ಸುಚಿರಾಯು ಆಸ್ಪತ್ರೆಗೆ ಕಳುಹಿಸಿ ಎಂಬೊಲೈಸ್ ಮಾಡಿ ರಕ್ತಸ್ರಾವ ನಿಲ್ಲಿಸಲಾಗಿತ್ತು. ನಂತರ ಪುನಃ ಕಿಮ್ಸ್'ಗೆ ತಂದು ಐಸಿಯುನಲ್ಲಿ ದಾಖಲಿಸಿದ್ದೇವೆ. 24 ಗಂಟೆ ನಂತರ ಎಂಬೋಲೈಸ್ ತೆಗೆದಾಗ ಮತ್ತೆ ರಕ್ತ ಸ್ರಾವವಾಗಿದೆ. ಮಗುವಿಗೆ ಆರು ಬಾಟಲಿ ರಕ್ತ ನೀಡಿದ್ದೇವೆ. ನಮ್ಮಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ' ಎಂದು ತಿಳಿಸಿದರು.