ಗುರುವಾರ ಅವರು ಹೊಸೂರು ಬಸ್ ನಿಲ್ದಾಣ, ಬಿಆರ್ಟಿಎಸ್ ಪಾದಚಾರಿಮೇಲ್ಸೇತುವೆ, ವಾಣಿವಿಲಾಸ ವೃತ್ತದ ರಸ್ತೆಗೆ ಭೇಟಿ ನೀಡಿದ ಬಳಿಕ ಮಾತನಾಡಿ ‘ಹೊಸೂರು ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ನಗರದ ವಿವಿಧ ಭಾಗಗಳಿಂದ ಸಂಪರ್ಕ ಸಾರಿಗೆ ಬಸ್ಗಳ ಸಂಖ್ಯೆ ಹೆಚ್ಚಿಸಬೇಕು. ಕುಡಿಯುವ ನೀರು, ಶೌಚಾಲಯ, ಪ್ರಯಾಣಿಕರ ಆಸನಗಳು ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲು ಒತ್ತು ನೀಡಬೇಕು’ ಎಂದರು.