<p><strong>ಹುಬ್ಬಳ್ಳಿ:</strong> ‘ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ಮತ್ತು ಅಪಾಯಕಾರಿ ನೀತಿ ಖಂಡಿಸಿ ಆಗಸ್ಟ್ 16 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಸಿಟಿಜನ್ ಫಾರ್ ಡೆಮಾಕ್ರೆಸಿ (ಸಿಎಫ್ಡಿ) ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಟಿಜನ್ ಫಾರ್ ಡೆಮಾಕ್ರೆಸಿ (ಸಿಎಫ್ಡಿ), ಜನಾಂದೋಲನ ಮಹಾಮೈತ್ರಿ (ಜೆಎಂಎಂ), ನೈಸರ್ಗಿಕ ಸಂಪನ್ಮೂಲ ರಕ್ಷಣೆ ಸಮಿತಿ (ಎನ್ಸಿಪಿಎನ್ಆರ್) ಮತ್ತು ಗಣಿ ಬಾಧಿತ ಪರಿಸರ ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದರು.</p>.<p>ಪ್ರತಿಭಟನೆಯ ಭಾಗವಾಗಿ ಆಗಸ್ಟ್ 1ರಿಂದ ಆಗಸ್ಟ್ 4ರವರೆಗೆ ಬಳ್ಳಾರಿ ಜಿಲ್ಲೆಯ ಗಣಿ ಬಾಧಿತ ಗ್ರಾಮಗಳಲ್ಲಿ ಬೃಹತ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.</p>.<p>ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ಗಣಿ ಬಾಧಿತ ಜಿಲ್ಲೆಗಳಲ್ಲಿ ಜನರ ಬವಣೆ ನಿವಾರಣೆಗೆ ₹30 ಸಾವಿರ ಕೋಟಿ ಮೀಸಲಿಡಲಾಗಿದ್ದು, ಅದು ಸದ್ಬಳಕೆಯಾಗುತ್ತಿಲ್ಲ ಎಂದು ದೂರಿದರು. </p>.<p>ರಾಜ್ಯದ ಎಲ್ಲಾ ಕಬ್ಬಿಣದ ಅದಿರು ಗಣಿಗಳಲ್ಲಿ ಅದಿರು ಉತ್ಪಾದನಾ ಮಿತಿಯನ್ನು 57 ದಶಲಕ್ಷ ಟನ್ (ಎಂಟಿ)ಗೆ ಹೆಚ್ಚಿಸುತ್ತಿರುವುದು ಖಂಡನೀಯ. ಅಲ್ಲದೆ, ರಾಜ್ಯದಲ್ಲಿ ಹೊಸ ಗಣಿಗಳಿಗೆ ಅನುಮತಿ ನೀಡಬಾರದು ಎಂದರು. </p>.<p>ದೇವನಹಳ್ಳಿಯಲ್ಲಿ ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆ ಮುಂದಾದಾಗ ಆ ಭಾಗದ 13 ಹಳ್ಳಿಗಳ ಜನರು 1198 ದಿನ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿದಿದೆ. ಇದು ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ಮತ್ತು ಅಪಾಯಕಾರಿ ನೀತಿ ಖಂಡಿಸಿ ಆಗಸ್ಟ್ 16 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಸಿಟಿಜನ್ ಫಾರ್ ಡೆಮಾಕ್ರೆಸಿ (ಸಿಎಫ್ಡಿ) ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಟಿಜನ್ ಫಾರ್ ಡೆಮಾಕ್ರೆಸಿ (ಸಿಎಫ್ಡಿ), ಜನಾಂದೋಲನ ಮಹಾಮೈತ್ರಿ (ಜೆಎಂಎಂ), ನೈಸರ್ಗಿಕ ಸಂಪನ್ಮೂಲ ರಕ್ಷಣೆ ಸಮಿತಿ (ಎನ್ಸಿಪಿಎನ್ಆರ್) ಮತ್ತು ಗಣಿ ಬಾಧಿತ ಪರಿಸರ ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದರು.</p>.<p>ಪ್ರತಿಭಟನೆಯ ಭಾಗವಾಗಿ ಆಗಸ್ಟ್ 1ರಿಂದ ಆಗಸ್ಟ್ 4ರವರೆಗೆ ಬಳ್ಳಾರಿ ಜಿಲ್ಲೆಯ ಗಣಿ ಬಾಧಿತ ಗ್ರಾಮಗಳಲ್ಲಿ ಬೃಹತ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.</p>.<p>ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ಗಣಿ ಬಾಧಿತ ಜಿಲ್ಲೆಗಳಲ್ಲಿ ಜನರ ಬವಣೆ ನಿವಾರಣೆಗೆ ₹30 ಸಾವಿರ ಕೋಟಿ ಮೀಸಲಿಡಲಾಗಿದ್ದು, ಅದು ಸದ್ಬಳಕೆಯಾಗುತ್ತಿಲ್ಲ ಎಂದು ದೂರಿದರು. </p>.<p>ರಾಜ್ಯದ ಎಲ್ಲಾ ಕಬ್ಬಿಣದ ಅದಿರು ಗಣಿಗಳಲ್ಲಿ ಅದಿರು ಉತ್ಪಾದನಾ ಮಿತಿಯನ್ನು 57 ದಶಲಕ್ಷ ಟನ್ (ಎಂಟಿ)ಗೆ ಹೆಚ್ಚಿಸುತ್ತಿರುವುದು ಖಂಡನೀಯ. ಅಲ್ಲದೆ, ರಾಜ್ಯದಲ್ಲಿ ಹೊಸ ಗಣಿಗಳಿಗೆ ಅನುಮತಿ ನೀಡಬಾರದು ಎಂದರು. </p>.<p>ದೇವನಹಳ್ಳಿಯಲ್ಲಿ ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆ ಮುಂದಾದಾಗ ಆ ಭಾಗದ 13 ಹಳ್ಳಿಗಳ ಜನರು 1198 ದಿನ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿದಿದೆ. ಇದು ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>