ಭಾನುವಾರ, ಏಪ್ರಿಲ್ 2, 2023
33 °C

ಧಾರವಾಡ: ಬೆಂಗಳೂರು ಆರ್ಮಿ ತಂಡಕ್ಕೆ ಕಬಡ್ಡಿ ಟ್ರೋಫಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ತಾಲ್ಲೂಕಿನ ಹೆಬ್ಬಳ್ಳಿಯಲ್ಲಿ ಅಮೃತ ದೇಸಾಯಿ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಬೆಂಗಳೂರು ಆರ್ಮಿ ತಂಡವು ಬಾಗಲಕೋಟೆ ತಂಡವನ್ನು ಪರಾಭವಗೊಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಗ್ರಾಮದ ನೆಹರು ಪ್ರೌಢಶಾಲೆಯ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಜಿಲ್ಲೆಗಳ ತಂಡಗಳು ಭಾಗವಹಿಸಿದ್ದರು. ಬೆಂಗಳೂರು ಆರ್ಮಿ ಹಾಗೂ ಬಾಗಲಕೋಟೆ ತಂಡದ ನಡುವಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿತ್ತು.

ಟಾಸ್ ಗೆದ್ದ ಆಟ ಆರಂಭಿಸಿದ ಬೆಂಗಳೂರು ಆರ್ಮಿ ತಂಡ ಬಾಗಲಕೋಟೆ ತಂಡವನ್ನು ಪರಾಭವಗೊಳಿಸಿ ವಿಜಯ ಮಾಲೆ ಧರಿಸಿತು. ವಿಜೇತ ತಂಡಕ್ಕೆ ₹1ಲಕ್ಷ ನಗದು ಹಾಗೂ ಪಾರಿತೋಷಕವನ್ನು ಶಾಸಕ ಅಮೃತ ದೇಸಾಯಿ ನೀಡಿ ಅಭಿನಂದಿಸಿದರು.

ಬಾಗಲಕೋಟೆ ತಂಡ ₹50ಸಾವಿರ ನಗರದು ಹಾಗೂ ಸ್ಮರಣಿಕೆಯನ್ನು, ಕರ್ನಾಟಕ ಸೀನಿಯರ್ ಹಾಗೂ ಕರ್ನಾಟಕ ಜೂನಿಯರ್ ತಂಡಗಳು ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದ ತಲಾ ₹25ಸಾವಿರ ಬಹುಮಾನವನ್ನು ಪಡೆದವು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ನಿತಿನ್ ಇಂಡಿ, ಸಂತೋಷ ಗೌಡ ಪಾಟೀಲ, ನಾಗನಗೌಡ ಪಾಟೀಲ, ಮಲ್ಲಿಕಾರ್ಜುನ ಬಾಳಿಕಾಯಿ, ಸಹದೇವ ಹಾವೇರಿ, ಚಂದ್ರು ಮೋರೆ, ಆತ್ಮಾನಂದ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು