ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಬೆಂಗಳೂರು ಆರ್ಮಿ ತಂಡಕ್ಕೆ ಕಬಡ್ಡಿ ಟ್ರೋಫಿ

Last Updated 27 ಜನವರಿ 2023, 6:05 IST
ಅಕ್ಷರ ಗಾತ್ರ

ಧಾರವಾಡ: ತಾಲ್ಲೂಕಿನ ಹೆಬ್ಬಳ್ಳಿಯಲ್ಲಿ ಅಮೃತ ದೇಸಾಯಿ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಬೆಂಗಳೂರು ಆರ್ಮಿ ತಂಡವು ಬಾಗಲಕೋಟೆ ತಂಡವನ್ನು ಪರಾಭವಗೊಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಗ್ರಾಮದ ನೆಹರು ಪ್ರೌಢಶಾಲೆಯ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಜಿಲ್ಲೆಗಳ ತಂಡಗಳು ಭಾಗವಹಿಸಿದ್ದರು. ಬೆಂಗಳೂರು ಆರ್ಮಿ ಹಾಗೂ ಬಾಗಲಕೋಟೆ ತಂಡದ ನಡುವಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿತ್ತು.

ಟಾಸ್ ಗೆದ್ದ ಆಟ ಆರಂಭಿಸಿದ ಬೆಂಗಳೂರು ಆರ್ಮಿ ತಂಡ ಬಾಗಲಕೋಟೆ ತಂಡವನ್ನು ಪರಾಭವಗೊಳಿಸಿ ವಿಜಯ ಮಾಲೆ ಧರಿಸಿತು. ವಿಜೇತ ತಂಡಕ್ಕೆ ₹1ಲಕ್ಷ ನಗದು ಹಾಗೂ ಪಾರಿತೋಷಕವನ್ನು ಶಾಸಕ ಅಮೃತ ದೇಸಾಯಿ ನೀಡಿ ಅಭಿನಂದಿಸಿದರು.

ಬಾಗಲಕೋಟೆ ತಂಡ ₹50ಸಾವಿರ ನಗರದು ಹಾಗೂ ಸ್ಮರಣಿಕೆಯನ್ನು, ಕರ್ನಾಟಕ ಸೀನಿಯರ್ ಹಾಗೂ ಕರ್ನಾಟಕ ಜೂನಿಯರ್ ತಂಡಗಳು ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದ ತಲಾ ₹25ಸಾವಿರ ಬಹುಮಾನವನ್ನು ಪಡೆದವು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ನಿತಿನ್ ಇಂಡಿ, ಸಂತೋಷ ಗೌಡ ಪಾಟೀಲ, ನಾಗನಗೌಡ ಪಾಟೀಲ, ಮಲ್ಲಿಕಾರ್ಜುನ ಬಾಳಿಕಾಯಿ, ಸಹದೇವ ಹಾವೇರಿ, ಚಂದ್ರು ಮೋರೆ, ಆತ್ಮಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT