ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರೊನಾ ಸೋಂಕು ತಡೆಯುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಆದರೆ, ಸರ್ಕಾರ ಇವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ. ಆರ್ಸಿಎಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಬಗೆಹರಿಸಬೇಕು. ಬಿಡಿಬಿಡಿಯಾಗಿ ನೀಡತ್ತಿರುವ ರಾಜ್ಯ ಸರ್ಕಾರದ ಗೌರವಧನ, ನಿಗದಿತ ಚಟುವಟಿಕೆಗಳಿಗೆ ನೀಡುವ ನಿಶ್ಚಿತ ಗೌರವಧನ ಹಾಗೂ ಆಶಾ ನಿಧಿಯ ಮೂಲಕ ಪಡೆಯುವ ವಿವಿಧ ಚಟುವಟಿಕೆಗಳ ಪ್ರೋತ್ಸಾಹಧನವನ್ನು ಒಂದು ಮಾಡಿ ಪ್ರತಿ ತಿಂಗಳು 10ರೊಳಗೆ ನೀಡಬೇಕು’ ಎಂದು ಆಗ್ರಹಿಸಿದರು.