<p><strong>ಹುಬ್ಬಳ್ಳಿ: </strong>ಗುಂತಕಲ್ ವಿಭಾಗದಲ್ಲಿ ಜೋಡಿ ರೈಲು ಮಾರ್ಗದ ಕಾಮಗಾರಿ ನಡೆಯುತ್ತಿರುವ ಕಾರಣ ಸೆ.27ರಿಂದ ಮೂರು ದಿನ ಮೈಸೂರು–ಬಾಗಲಕೋಟೆ ಬಸವ ಎಕ್ಸ್ಪ್ರೆಸ್ ಸಂಚಾರವನ್ನು ರದ್ದು ಮಾಡಲಾಗಿದೆ. ಈ ರೈಲು 28ರಿಂದ ಮೂರು ದಿನ ಬಾಗಲಕೋಟೆಯಿಂದಲೂ ಸಂಚರಿಸುವುದಿಲ್ಲ.</p>.<p>ಹುಬ್ಬಳ್ಳಿ– ಮೈಸೂರು ಹಂಪಿ ಎಕ್ಸ್ಪ್ರೆಸ್ ರೈಲಿನ ಸಂಚಾರ ಮಾರ್ಗವನ್ನು ಸೆ.25ರಿಂದ 29ರವರೆಗೆ ಬದಲಾವಣೆ ಮಾಡಲಾಗಿದ್ದು, ಈ ರೈಲು ಗುಂತಕಲ್, ಕಲ್ಲೂರು, ಧರ್ಮಾವರಂ ಬದಲು ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ಅರಸೀಕೆರೆ, ಯಶವಂತಪುರ ಮಾರ್ಗದಲ್ಲಿ ಸಂಚರಿಸಲಿದೆ. ಮೈಸೂರಿನಿಂದಲೂ ಇದೇ ಮಾರ್ಗದಲ್ಲಿ ಹುಬ್ಬಳ್ಳಿಗೆ ಬರಲಿದೆ.</p>.<p>ಮೈಸೂರು– ಸಾಯಿನಗರ ಶಿರಡಿ ನಡುವೆ ವಾರಕ್ಕೊಮ್ಮೆ ಸಂಚರಿಸುವ ರೈಲು 30ರಂದು ಧರ್ಮಾವರಂ ಮಾರ್ಗದ ಬದಲಾಗಿ ತುಮಕೂರು, ಅರಸೀಕೆರೆ, ಚಿಕ್ಕಜಾಜೂರು, ರಾಯದುರ್ಗ, ಬಳ್ಳಾರಿ ಮಾರ್ಗದಲ್ಲಿ ಸಂಚರಿಸಲಿದೆ. 29ರಂದು ಕೆಎಸ್ಆರ್ ಬೆಂಗಳೂರು– ಜೋಧಪುರ ಎಕ್ಸ್ಪ್ರೆಸ್ ರೈಲು ಸಹ ಇದೇ ಮಾರ್ಗದಲ್ಲಿ ಹುಬ್ಬಳ್ಳಿಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಗುಂತಕಲ್ ವಿಭಾಗದಲ್ಲಿ ಜೋಡಿ ರೈಲು ಮಾರ್ಗದ ಕಾಮಗಾರಿ ನಡೆಯುತ್ತಿರುವ ಕಾರಣ ಸೆ.27ರಿಂದ ಮೂರು ದಿನ ಮೈಸೂರು–ಬಾಗಲಕೋಟೆ ಬಸವ ಎಕ್ಸ್ಪ್ರೆಸ್ ಸಂಚಾರವನ್ನು ರದ್ದು ಮಾಡಲಾಗಿದೆ. ಈ ರೈಲು 28ರಿಂದ ಮೂರು ದಿನ ಬಾಗಲಕೋಟೆಯಿಂದಲೂ ಸಂಚರಿಸುವುದಿಲ್ಲ.</p>.<p>ಹುಬ್ಬಳ್ಳಿ– ಮೈಸೂರು ಹಂಪಿ ಎಕ್ಸ್ಪ್ರೆಸ್ ರೈಲಿನ ಸಂಚಾರ ಮಾರ್ಗವನ್ನು ಸೆ.25ರಿಂದ 29ರವರೆಗೆ ಬದಲಾವಣೆ ಮಾಡಲಾಗಿದ್ದು, ಈ ರೈಲು ಗುಂತಕಲ್, ಕಲ್ಲೂರು, ಧರ್ಮಾವರಂ ಬದಲು ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ಅರಸೀಕೆರೆ, ಯಶವಂತಪುರ ಮಾರ್ಗದಲ್ಲಿ ಸಂಚರಿಸಲಿದೆ. ಮೈಸೂರಿನಿಂದಲೂ ಇದೇ ಮಾರ್ಗದಲ್ಲಿ ಹುಬ್ಬಳ್ಳಿಗೆ ಬರಲಿದೆ.</p>.<p>ಮೈಸೂರು– ಸಾಯಿನಗರ ಶಿರಡಿ ನಡುವೆ ವಾರಕ್ಕೊಮ್ಮೆ ಸಂಚರಿಸುವ ರೈಲು 30ರಂದು ಧರ್ಮಾವರಂ ಮಾರ್ಗದ ಬದಲಾಗಿ ತುಮಕೂರು, ಅರಸೀಕೆರೆ, ಚಿಕ್ಕಜಾಜೂರು, ರಾಯದುರ್ಗ, ಬಳ್ಳಾರಿ ಮಾರ್ಗದಲ್ಲಿ ಸಂಚರಿಸಲಿದೆ. 29ರಂದು ಕೆಎಸ್ಆರ್ ಬೆಂಗಳೂರು– ಜೋಧಪುರ ಎಕ್ಸ್ಪ್ರೆಸ್ ರೈಲು ಸಹ ಇದೇ ಮಾರ್ಗದಲ್ಲಿ ಹುಬ್ಬಳ್ಳಿಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>