ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೂಲತಃ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರಿನವರಾದ ಬಸವಲಿಂಗಯ್ಯ ನೀನಾಸಂನಲ್ಲಿ ಶಿಕ್ಷಣ ಪಡೆದವರು. ಸುಗಮ ಸಂಗೀತ ಹಾಗೂ ಜಾನಪದ ಗಾಯಕರಾಗಿ, ದೊಡ್ಡಾಟ, ಸಣ್ಣಾಟ, ಪಾರಿಜಾತ ನಾಟಕಗಳನ್ನು ಆಧುನಿಕ ರಂಗಭೂಮಿಗೆ ಪರಿಚಯಿಸಿ ಅವುಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದರ ಜತೆಗೆ, ಅವುಗಳನ್ನು ಹೊಸ ಪೀಳಿಗೆಗೆ ಪರಿಚಯಿಸಿದರು.