<p><strong>ಹುಬ್ಬಳ್ಳಿ:</strong> ‘ಕಾಲ ಕೆಟ್ಟಿಲ್ಲ. ಮನುಷ್ಯರು ಕೆಟ್ಟಿದ್ದಾರೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಮನುಷ್ಯ ಕಾಲವನ್ನು ದೂರುತ್ತಿದ್ದಾನೆ. ಸತ್ಯ ನುಡಿದು, ಸತ್ಯದಿಂದ ಬದುಕಿದಾಗ ಎಲ್ಲವೂ ಸರಿಯಾಗಲಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.</p>.<p>ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜವು ಗುರುವಾರ ಹಮ್ಮಿಕೊಂಡಿದ್ದ ಶ್ರೀರಾಮ ನವಮಿ ಮತ್ತು ಕೃಷ್ಣ ದೇವರ ಪ್ರತಿಷ್ಠಾಪನೆ ಸುವರ್ಣ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಒಂದು ಸಂಸ್ಥೆಯ ಆರಂಭ ದೊಡ್ಡದಲ್ಲ. ಆದರೆ, ಅದನ್ನು ಐವತ್ತು ವರ್ಷಗಳವರೆಗೆ ಉಳಿಸಿಕೊಂಡು ಬರುವುದು ನಿಜಕ್ಕೂ ಸಾಧನೆ. ಈ ಪಯಣದಲ್ಲಿ ಸಮಾಜವು ತನ್ನ ಬಳಗಕ್ಕೆ ನೀಡಿರುವ ಸಂಸ್ಕಾರ ಶ್ಲಾಘನೀಯ. ಸಮಾಜದ ಸಂಘಟನೆ ತಪ್ಪಲ್ಲ. ಅದರ ದುರುಪಯೋಗ ತಪ್ಪು’ ಎಂದರು.</p>.<p>‘ಇಂದು ಯಾರೂ ನೆಮ್ಮದಿ ಮತ್ತು ಸಮಾಧಾನದಿಂದ ಇಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯ ಜಂಜಾಟದಲ್ಲಿ ಸಿಲುಕಿದ್ದೇವೆ. ಇಂತಹ ಸಂದರ್ಭದಲ್ಲಿ ಸಮಾಜಕ್ಕೆ ಮಾರ್ಗದರ್ಶನ ಮತ್ತು ನೆಮ್ಮದಿ ನೀಡುವ ಕಾರ್ಯಕ್ರಮ ಇದಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಧಾರವಾಡ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಮಾತನಾಡಿ, ‘ಬ್ರಾಹ್ಮಣರು ಮತ್ತು ಬಂಟರ ನಡುವೆ ಅನ್ಯೋನ್ಯ ಸಂಬಂಧವಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಸಹ ಕರೆದುಕೊಂಡು ಬರಬೇಕು. ಚಿಕ್ಕಂದಿನಿಂದಲೇ ಅವರಿಗೆ ಸಂಸ್ಕಾರ ಕಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಉಡುಪಿಯ ಪಲಿಮಾರು ಮಠದ ವಿದ್ಯಾದೀಶ ತೀರ್ಥ ಸ್ವಾಮೀಜಿ ಮತ್ತು ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p><strong>ಸನ್ಮಾನ:</strong> ಕೃಷ್ಣ ಮತ್ತು ರಾಘವೇಂದ್ರ ದೇವಾಲಯದಲ್ಲಿ ಐವತ್ತು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀನಾರಾಯಣ ಭಟ್ ದಂಪತಿಗೆ ‘ಶ್ರೀ ಕೃಷ್ಣ ಸೇವಾ ನಿರತ ಪ್ರಶಸ್ತಿ’ ಹಾಗೂ ಕೃಷ್ಣಮೂರ್ತಿ ತೆಂಕಿಲ್ಲಾಯ ದಂಪತಿಗೆ ‘ಶ್ರೀ ರಾಘವೇಂದ್ರ ಸೇವಾ ನಿರತ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.</p>.<p>ಬ್ರಾಹ್ಮಣ ಸಮಾಜದ ಅಧ್ಯಕ್ಷ ಅನಂತ ಪದ್ಮನಾಭ ಐತಾಳ ಸ್ವಾಗತಿಸಿದರು. ಪದಾಧಿಕಾರಿಗಳಾದ ಸುರೇಶ ಕೆಮ್ತೂರು, ವಾದಿರಾಜ ಭಟ್, ರಾಮಚಂದ್ರ ಉಪಾಧ್ಯ, ಅನಂತಕೃಷ್ಣ ಐತಾಳ್, ಗೀತಾ ಸೋಮೇಶ್ವರ, ಮನೋಹರ ಪರ್ವತಿ ಇದ್ದರು. ವೆಂಕಟೇಶ ಆಚಾರ್ಯ ಕೊರ್ಲಳ್ಳಿ ನಿರೂಪಣೆ ಮಾಡಿದರು.</p>.<p>ರಾಮ ನವಮಿ ಅಂಗವಾಗಿ ರಾಮ ಜನ್ಮೋತ್ಸವ ಮತ್ತು ತೊಟ್ಟಿಲೋತ್ಸವ ಜರುಗಿತು. ಪ್ರಸಾದ ವಿತರಣೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕಾಲ ಕೆಟ್ಟಿಲ್ಲ. ಮನುಷ್ಯರು ಕೆಟ್ಟಿದ್ದಾರೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಮನುಷ್ಯ ಕಾಲವನ್ನು ದೂರುತ್ತಿದ್ದಾನೆ. ಸತ್ಯ ನುಡಿದು, ಸತ್ಯದಿಂದ ಬದುಕಿದಾಗ ಎಲ್ಲವೂ ಸರಿಯಾಗಲಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.</p>.<p>ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜವು ಗುರುವಾರ ಹಮ್ಮಿಕೊಂಡಿದ್ದ ಶ್ರೀರಾಮ ನವಮಿ ಮತ್ತು ಕೃಷ್ಣ ದೇವರ ಪ್ರತಿಷ್ಠಾಪನೆ ಸುವರ್ಣ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಒಂದು ಸಂಸ್ಥೆಯ ಆರಂಭ ದೊಡ್ಡದಲ್ಲ. ಆದರೆ, ಅದನ್ನು ಐವತ್ತು ವರ್ಷಗಳವರೆಗೆ ಉಳಿಸಿಕೊಂಡು ಬರುವುದು ನಿಜಕ್ಕೂ ಸಾಧನೆ. ಈ ಪಯಣದಲ್ಲಿ ಸಮಾಜವು ತನ್ನ ಬಳಗಕ್ಕೆ ನೀಡಿರುವ ಸಂಸ್ಕಾರ ಶ್ಲಾಘನೀಯ. ಸಮಾಜದ ಸಂಘಟನೆ ತಪ್ಪಲ್ಲ. ಅದರ ದುರುಪಯೋಗ ತಪ್ಪು’ ಎಂದರು.</p>.<p>‘ಇಂದು ಯಾರೂ ನೆಮ್ಮದಿ ಮತ್ತು ಸಮಾಧಾನದಿಂದ ಇಲ್ಲ. ಎಲ್ಲರೂ ಒಂದಲ್ಲ ಒಂದು ರೀತಿಯ ಜಂಜಾಟದಲ್ಲಿ ಸಿಲುಕಿದ್ದೇವೆ. ಇಂತಹ ಸಂದರ್ಭದಲ್ಲಿ ಸಮಾಜಕ್ಕೆ ಮಾರ್ಗದರ್ಶನ ಮತ್ತು ನೆಮ್ಮದಿ ನೀಡುವ ಕಾರ್ಯಕ್ರಮ ಇದಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಧಾರವಾಡ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಮಾತನಾಡಿ, ‘ಬ್ರಾಹ್ಮಣರು ಮತ್ತು ಬಂಟರ ನಡುವೆ ಅನ್ಯೋನ್ಯ ಸಂಬಂಧವಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಸಹ ಕರೆದುಕೊಂಡು ಬರಬೇಕು. ಚಿಕ್ಕಂದಿನಿಂದಲೇ ಅವರಿಗೆ ಸಂಸ್ಕಾರ ಕಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಉಡುಪಿಯ ಪಲಿಮಾರು ಮಠದ ವಿದ್ಯಾದೀಶ ತೀರ್ಥ ಸ್ವಾಮೀಜಿ ಮತ್ತು ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p><strong>ಸನ್ಮಾನ:</strong> ಕೃಷ್ಣ ಮತ್ತು ರಾಘವೇಂದ್ರ ದೇವಾಲಯದಲ್ಲಿ ಐವತ್ತು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀನಾರಾಯಣ ಭಟ್ ದಂಪತಿಗೆ ‘ಶ್ರೀ ಕೃಷ್ಣ ಸೇವಾ ನಿರತ ಪ್ರಶಸ್ತಿ’ ಹಾಗೂ ಕೃಷ್ಣಮೂರ್ತಿ ತೆಂಕಿಲ್ಲಾಯ ದಂಪತಿಗೆ ‘ಶ್ರೀ ರಾಘವೇಂದ್ರ ಸೇವಾ ನಿರತ ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.</p>.<p>ಬ್ರಾಹ್ಮಣ ಸಮಾಜದ ಅಧ್ಯಕ್ಷ ಅನಂತ ಪದ್ಮನಾಭ ಐತಾಳ ಸ್ವಾಗತಿಸಿದರು. ಪದಾಧಿಕಾರಿಗಳಾದ ಸುರೇಶ ಕೆಮ್ತೂರು, ವಾದಿರಾಜ ಭಟ್, ರಾಮಚಂದ್ರ ಉಪಾಧ್ಯ, ಅನಂತಕೃಷ್ಣ ಐತಾಳ್, ಗೀತಾ ಸೋಮೇಶ್ವರ, ಮನೋಹರ ಪರ್ವತಿ ಇದ್ದರು. ವೆಂಕಟೇಶ ಆಚಾರ್ಯ ಕೊರ್ಲಳ್ಳಿ ನಿರೂಪಣೆ ಮಾಡಿದರು.</p>.<p>ರಾಮ ನವಮಿ ಅಂಗವಾಗಿ ರಾಮ ಜನ್ಮೋತ್ಸವ ಮತ್ತು ತೊಟ್ಟಿಲೋತ್ಸವ ಜರುಗಿತು. ಪ್ರಸಾದ ವಿತರಣೆ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>