<p><strong>ಹುಬ್ಬಳ್ಳಿ</strong>: ‘ಸಾರ್ವಜನಿಕರ ಕೆಲಸಕ್ಕಾಗಿ ವಿಧಾನ ಪರಿಷತ್ ಸದಸ್ಯರು ಕರೆ ಮಾಡಿದಾಗ ಸಕಾಲಕ್ಕೆ ಹಾಗೂ ಸಮರ್ಪಕವಾಗಿ ಸ್ಪಂದಿಸಲು ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಸಲ್ಲಿಸಿದ್ದಾರೆ.</p>.<p>‘ಸಾರ್ವಜನಿಕರ ಕೆಲಸಗಳು ಹಾಗೂ ಕುಂದು ಕೊರತೆ ಕುರಿತು ಚರ್ಚಿಸಲು ವಿಧಾನ ಪರಿಷತ್ ಸದಸ್ಯರು ದೂರವಾಣಿ ಮೂಲಕ ಸಂಪರ್ಕಿಸಿದಾಗ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ. ವಾಪಸ್ ಕರೆಯನ್ನೂ ಮಾಡುವುದಿಲ್ಲವೆಂದು ಪರಿಷತ್ ಸದಸ್ಯರು ಮೌಖಿಕವಾಗಿ ದೂರಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಅಧಿಕಾರಿಗಳ ಈ ವರ್ತನೆ ತೀವ್ರ ಅಸಮಾಧಾನ ಉಂಟುಮಾಡಿದೆ. ಇದು ಆಡಳಿತದ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುತ್ತದೆ. ಶಾಸಕರ ಹಕ್ಕುಚ್ಯುತಿ ವಾಪ್ತಿಗೆ ಇದು ಒಳಪಡುವುದರಿಂದ ಅನಿವಾರ್ಯವಾಗಿ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಬೇಕಾಗುತ್ತದೆ. ಹಾಗಾಗಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಸಾರ್ವಜನಿಕರ ಕೆಲಸಕ್ಕಾಗಿ ವಿಧಾನ ಪರಿಷತ್ ಸದಸ್ಯರು ಕರೆ ಮಾಡಿದಾಗ ಸಕಾಲಕ್ಕೆ ಹಾಗೂ ಸಮರ್ಪಕವಾಗಿ ಸ್ಪಂದಿಸಲು ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಸಲ್ಲಿಸಿದ್ದಾರೆ.</p>.<p>‘ಸಾರ್ವಜನಿಕರ ಕೆಲಸಗಳು ಹಾಗೂ ಕುಂದು ಕೊರತೆ ಕುರಿತು ಚರ್ಚಿಸಲು ವಿಧಾನ ಪರಿಷತ್ ಸದಸ್ಯರು ದೂರವಾಣಿ ಮೂಲಕ ಸಂಪರ್ಕಿಸಿದಾಗ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ. ವಾಪಸ್ ಕರೆಯನ್ನೂ ಮಾಡುವುದಿಲ್ಲವೆಂದು ಪರಿಷತ್ ಸದಸ್ಯರು ಮೌಖಿಕವಾಗಿ ದೂರಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಅಧಿಕಾರಿಗಳ ಈ ವರ್ತನೆ ತೀವ್ರ ಅಸಮಾಧಾನ ಉಂಟುಮಾಡಿದೆ. ಇದು ಆಡಳಿತದ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುತ್ತದೆ. ಶಾಸಕರ ಹಕ್ಕುಚ್ಯುತಿ ವಾಪ್ತಿಗೆ ಇದು ಒಳಪಡುವುದರಿಂದ ಅನಿವಾರ್ಯವಾಗಿ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಬೇಕಾಗುತ್ತದೆ. ಹಾಗಾಗಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>