<p><strong>ಹುಬ್ಬಳ್ಳಿ:</strong> ಬಿಜೆಪಿ ಸರ್ಕಾರ 2009–10ನೇ ಸಾಲಿನಲ್ಲಿ ಪ್ರವಾಹ ಬಂದಾಗಲೂ ಸರಿಯಾಗಿ ನಿರ್ವಹಿಸಿರಲಿಲ್ಲ. ಈಗಲೂ ಅದೇ ನಿರ್ಲಕ್ಷ್ಯ ಮುಂದುವರೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಟೀಕಿಸಿದರು.</p>.<p>ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯರಾಗಿ 40 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಬಿದ್ದವರಿಗೆ ಬಹಳ ಕಡಿಮೆ ಪರಿಹಾರ ನೀಡಲಾಗುತ್ತಿದೆ. ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಕೆಲ ಸಚಿವರು ಕ್ವಾರಂಟೈನ್ನಲ್ಲಿದ್ದಾರೆ. ಕೆಲವು ಸಚಿವರು ಮಾತ್ರ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸುತ್ತಿದ್ದಾರೆ. ಸಚಿವರೆಲ್ಲರೂ ಒಗ್ಗಟ್ಟಾಗಿ ಪ್ರವಾಹದಿಂದ ಕಷ್ಟಕ್ಕೊಳಗಾದವರಿಗೆ ಸ್ಪಂದಿಸಬೇಕು ಎಂದರು.</p>.<p>ಜೆಡಿಎಸ್ ಮುಖಂಡ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಕಳೆದ ವರ್ಷ ಪ್ರವಾಹದಿಂದ ಸಂಕಷ್ಟಕ್ಕೊಳಗಾದವರಿಗೆ ಸರಿಯಾಗಿ ಪರಿಹಾರ ದೊರೆತಿಲ್ಲ. ಬೆಳೆ ಹಾನಿಯಾಗಿದೆ. ರಸ್ತೆಗಳೂ ಕಿತ್ತು ಹೋಗಿವೆ. ಸರ್ಕಾರಕ್ಕೆ ನಷ್ಟದ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಬಿಜೆಪಿ ಸರ್ಕಾರ 2009–10ನೇ ಸಾಲಿನಲ್ಲಿ ಪ್ರವಾಹ ಬಂದಾಗಲೂ ಸರಿಯಾಗಿ ನಿರ್ವಹಿಸಿರಲಿಲ್ಲ. ಈಗಲೂ ಅದೇ ನಿರ್ಲಕ್ಷ್ಯ ಮುಂದುವರೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಟೀಕಿಸಿದರು.</p>.<p>ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯರಾಗಿ 40 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಬಿದ್ದವರಿಗೆ ಬಹಳ ಕಡಿಮೆ ಪರಿಹಾರ ನೀಡಲಾಗುತ್ತಿದೆ. ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ಕೆಲ ಸಚಿವರು ಕ್ವಾರಂಟೈನ್ನಲ್ಲಿದ್ದಾರೆ. ಕೆಲವು ಸಚಿವರು ಮಾತ್ರ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸುತ್ತಿದ್ದಾರೆ. ಸಚಿವರೆಲ್ಲರೂ ಒಗ್ಗಟ್ಟಾಗಿ ಪ್ರವಾಹದಿಂದ ಕಷ್ಟಕ್ಕೊಳಗಾದವರಿಗೆ ಸ್ಪಂದಿಸಬೇಕು ಎಂದರು.</p>.<p>ಜೆಡಿಎಸ್ ಮುಖಂಡ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಕಳೆದ ವರ್ಷ ಪ್ರವಾಹದಿಂದ ಸಂಕಷ್ಟಕ್ಕೊಳಗಾದವರಿಗೆ ಸರಿಯಾಗಿ ಪರಿಹಾರ ದೊರೆತಿಲ್ಲ. ಬೆಳೆ ಹಾನಿಯಾಗಿದೆ. ರಸ್ತೆಗಳೂ ಕಿತ್ತು ಹೋಗಿವೆ. ಸರ್ಕಾರಕ್ಕೆ ನಷ್ಟದ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>