ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಕ್ಷೇತ್ರ ಸಮಸ್ಯೆ ಪರಿಹರಿಸಿ: ಬೊಮ್ಮಾಯಿಗೆ ಹೊರಟ್ಟಿ ಪತ್ರ

Last Updated 10 ಫೆಬ್ರುವರಿ 2022, 15:45 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಲವಾರು ದಿನಗಳಿಂದ ನನೆಗುದಿಗೆ ಬಿದ್ದಿರುವ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂಬರುವ ಬಜೆಟ್‌ನಲ್ಲಿ ಕ್ರಮಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸಭಾಪತಿ, ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

1994-95ರ ನಂತರ ಪ್ರಾರಂಭಿಸಿದ ಶಿಕ್ಷಣ ಸಂಸ್ಥೆಗಳನ್ನು ವೇತನ ಅನುದಾನಕ್ಕೆ ಒಳಪಡಿಸಬೇಕು. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಭರ್ತಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದಿದ್ದಾರೆ.

ಕಾಲ್ಪನಿಕ ವೇತನ ವರದಿ ಜಾರಿಗೆ ₹382 ಕೋಟಿ ಅನುದಾನ, 2006 ಏಪ್ರಿಲ್‌ 1ರ ನಂತರ ನೇಮಕಗೊಂಡ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ನೂತನ ಪಿಂಚಣಿ ಯೋಜನೆಯಡಿ ಸೇರಿಸಿ, ಆಡಳಿತ ಮಂಡಳಿಯವರೇ ತಮ್ಮ ಪಾಲಿನ ವಂತಿಗೆ ತುಂಬಬೇಕು ಎಂದು ಆದೇಶಿಸಲಾಗಿದೆ. ಅದರ ಬದಲು ಸರ್ಕಾರವೇ ವಂತಿಗೆ ತುಂಬಲು ₹132 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ತಿಳಿಸಿದ್ದಾರೆ.

1994– 95ಕ್ಕಿಂತ ಮೊದಲು ಆರಂಭವಾದ ಖಾಸಗಿ ಪದವಿಗಳು ಕಾಲೇಜುಗಳನ್ನು ವೇತನ ಅನುದಾನಕ್ಕೆ ಅಳವಡಿಸಬೇಕು. 1985 ರಿಂದ 1987ರ ವರೆಗೆ ಪ್ರಾರಂಭಿಸಿದ ಖಾಸಗಿ ಪಾಲಿಟೆಕ್ನಿಕ್‍ಗಳನ್ನು ವೇತನ ಅನುದಾನಕ್ಕೆ ಒಳಪಡಿಸಿ ಹಿಂದೆ ಆದೇಶ ಹೊರಡಿಸಿದ್ದು, ಆರ್ಥಿಕ ಇಲಾಖೆ ಅನುದಾನ ನೀಡಿಲ್ಲ. ಬಜೆಟ್‌ನಲ್ಲಿ ಸೂಕ್ತ ಅನುದಾನ ಬಿಡುಗಡೆಬೇಕು ಎಂದಿದ್ದಾರೆ.

ಖಾಸಗಿ ಐಟಿಐ ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸಲು ಸೂಕ್ತ ಅನುದಾನ ಒದಗಿಸುವುದು. ರಾಜ್ಯದಲ್ಲಿ ಖಾಲಿ ಇರುವ 2 ಲಕ್ಷಕ್ಕೂ ಸರ್ಕಾರಿ ನೌಕರರ ಹುದ್ದೆ ಭರ್ತಿ ಮಾಡಬೇಕು ಎಂದಿ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT