ಈ ಕುರಿತು ಇಂಧನ ಸಚಿವರಿಗೆ ಪತ್ರ ಬರೆದಿರುವ ಅವರು, ‘ಈಚೆಗೆ ರಾಯಚೂರು, ಮಂತ್ರಾಲಯದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ, ಗಂಗಾವತಿ, ಸಿಂಧನೂರ, ಮಾನವಿ, ಗೋರಕಲ್ ಸೇರಿದಂತೆ ಬಹುತೇಕ ಕಡೆ ಹಗಲಿನಲ್ಲಿಯೂ ಬೀದಿ ದೀಪಗಳು ಉರಿಯುತ್ತಿದ್ದವು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಹಣ ವಿನಿಯೋಗಿಸುತ್ತಿರುವ ಸರ್ಕಾರ, ವಿದ್ಯುತ್ ಉಳಿತಾಯದ ಬಗ್ಗೆ ಅರಿವು ಮೂಡಿಸಬೇಕಿದೆ’ ಎಂದು ಮನವಿ ಮಾಡಿದ್ದಾರೆ.