ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಪೋಲು ತಡೆಯಿರಿ

ಇಂಧನ ಸಚಿವರಿಗೆ ಬಸವರಾಜ ಹೊರಟ್ಟಿ ಪತ್ರ
Last Updated 29 ಜನವರಿ 2023, 16:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ವಿದ್ಯುತ್‌ ಸಮರ್ಪಕವಾಗಿ ಪೂರೈಕೆಯಾಗದೆ ರೈತರು ಸಂಕಷ್ಟದಲ್ಲಿದ್ದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಗಲಿನಲ್ಲೂ ಬೀದಿ ದೀಪಗಳು ಉರಿಯುತ್ತಿರುವುದರಿಂದ ವಿದ್ಯುತ್‌ ಪೋಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂಧನ ಸಚಿವರಿಗೆ ಪತ್ರ ಬರೆದಿರುವ ಅವರು, ‘ಈಚೆಗೆ ರಾಯಚೂರು, ಮಂತ್ರಾಲಯದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ, ಗಂಗಾವತಿ, ಸಿಂಧನೂರ, ಮಾನವಿ, ಗೋರಕಲ್ ಸೇರಿದಂತೆ ಬಹುತೇಕ ಕಡೆ ಹಗಲಿನಲ್ಲಿಯೂ ಬೀದಿ ದೀಪಗಳು ಉರಿಯುತ್ತಿದ್ದವು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಹಣ ವಿನಿಯೋಗಿಸುತ್ತಿರುವ ಸರ್ಕಾರ, ವಿದ್ಯುತ್‌ ಉಳಿತಾಯದ ಬಗ್ಗೆ ಅರಿವು ಮೂಡಿಸಬೇಕಿದೆ’ ಎಂದು ಮನವಿ ಮಾಡಿದ್ದಾರೆ.

‘ಹಲವು ಗ್ರಾಮಗಳಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಕೆಯಾಗದೆ ರೈತರು ಪರದಾಡುತ್ತಿದ್ದಾರೆ. ಹೀಗಿರುವಾಗ, ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿದ್ಯುತ್‌ ಪೋಲು ಮಾಡುವುದು ಸರಿಯಲ್ಲ. ಈ ವಿದ್ಯುತ್‌ ಉಳಿತಾಯ ಮಾಡಿದರೆ ಅಗತ್ಯ ಇರುವೆಡೆ ಸಮಪರ್ಕವಾಗಿ ಪೂರೈಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಜಾಗೃತಿ ಮೂಡಿಸಬೇಕು. ವಿದ್ಯುತ್ ಪೋಲಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಚಿವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT