‘ಕಾಂಗ್ರೆಸ್ನವರು ಒಂದೆಡೆ ದೇಶ ಒಡೆಯುವುದು ಮಾತನಾಡಿದರೆ, ಇನ್ನೊಂದೆಡೆ ದೇಶದ್ರೋಹಿ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಾರೆ. ಅವರಿಂದ ಈ ದೇಶ, ನಾಡನ್ನು ಸುರಕ್ಷಿತವಾಗಿಡಲು ಆಗಲ್ಲ. ಅವರು ನೈತಿಕತೆ ಕಳೆದುಕೊಂಡಿದ್ದಾರೆ. ಜನ ಎಚ್ಚೆತ್ತುಕೊಂಡು ಎಷ್ಟು ಬೇಗ ಈ ಸರ್ಕಾರವನ್ನು ಕಿತ್ತೊಗೆಯುತ್ತಾರೋ, ಅಷ್ಟು ಬೇಗ ಈ ನಾಡು ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ’ ಎಂದು ಅವರು ಹೇಳಿದರು.