<p><strong>ಧಾರವಾಡ:</strong> ಶ್ರೀಧರ ಗಸ್ತಿ ಅವರು ರಚಿಸಿದ ಮಕ್ಕಳ ಸಾಹಿತ್ಯ ಕೃತಿಗಳು ಶಾಲಾ ಜೀವನದ ವಾಸ್ತವಿಕ ಅನುಭವಗಳ ಸಾರವಾಗಿವೆ ಎಂದು ಲೇಖಕ ಬಸು ಬೇವಿನಗಿಡದ ಹೇಳಿದರು.</p>.<p>ಚಿಲಿಪಿಲಿ ಪ್ರಕಾಶನ ವತಿಯಿಂದ ರಾ.ಹ ದೇಶಪಾಂಡೆ ಸಭಾಂಗಣದಲ್ಲಿ ಈಚೆಗೆ ನಡೆದ ಸಾಹಿತಿ ಶ್ರೀಧರ ಗಸ್ತಿ ಅವರ `ದಿ ಕಪ್ಟಿಚ್ಡ ಬೈ ದೇವಮ್ಮ' ಹಾಗೂ `ಎಳೆಬಾಳೆ ಸುಳಿ ನಾನವ್ವ' ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ‘ಶ್ರೀಧರ ಗಸ್ತಿ ಅವರ ಸಾಹಿತ್ಯದಲ್ಲಿ ಬದುಕಿನ ಸತ್ಯಗಳಿವೆ. ಆಧುನಿಕತೆಯ ವಾಸ್ತವಿದ ಕಥೆಗಳಿವೆ’ ಎಂದರು.</p>.<p>ರಂಗಕರ್ಮಿ ಝಾಕಿರ್ ನದಾಫ್ `ಎಳೆಬಾಳೆ ಸುಳಿನಾನವ್ವ' ಕೃತಿ ಕುರಿತು ಮಾತನಾಡಿ, ಮಕ್ಕಳ ನಾಟಕ ಬರೆಯುವುದು ಪ್ರಯಾಸದಾಯಕ. ಮಕ್ಕಳ ಮನಸ್ಥಿತಿ, ಭಾವನೆ ಅರಿತು ನಾಟಕ ರಚಿಸಬೇಕಾಗುತ್ತದೆ. ಬಾಲ್ಯವಿವಾಹಂಥ ಸಾಮಾಜಿಕ ಅನಿಷ್ಟಗಳ ಕುರಿತು ನಾಟಕ ರಚಿಸಿ ಸಮಾಜ ಪರಿವರ್ತನೆಗೆ ಪ್ರಯತ್ನಿಸಿದ್ದಾರೆ’ ಎಂದು ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಧ್ಯಕ್ಷತೆ ವಹಿಸಿದ್ದರು. ರಂಗಕರ್ಮಿ ಸಿದ್ಧರಾಮ ಹಿಪ್ಪರಗಿ, ವೈ.ಜಿ.ಭಗವತಿ, ಶ್ರೀಧರ ಗಸ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಶ್ರೀಧರ ಗಸ್ತಿ ಅವರು ರಚಿಸಿದ ಮಕ್ಕಳ ಸಾಹಿತ್ಯ ಕೃತಿಗಳು ಶಾಲಾ ಜೀವನದ ವಾಸ್ತವಿಕ ಅನುಭವಗಳ ಸಾರವಾಗಿವೆ ಎಂದು ಲೇಖಕ ಬಸು ಬೇವಿನಗಿಡದ ಹೇಳಿದರು.</p>.<p>ಚಿಲಿಪಿಲಿ ಪ್ರಕಾಶನ ವತಿಯಿಂದ ರಾ.ಹ ದೇಶಪಾಂಡೆ ಸಭಾಂಗಣದಲ್ಲಿ ಈಚೆಗೆ ನಡೆದ ಸಾಹಿತಿ ಶ್ರೀಧರ ಗಸ್ತಿ ಅವರ `ದಿ ಕಪ್ಟಿಚ್ಡ ಬೈ ದೇವಮ್ಮ' ಹಾಗೂ `ಎಳೆಬಾಳೆ ಸುಳಿ ನಾನವ್ವ' ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ‘ಶ್ರೀಧರ ಗಸ್ತಿ ಅವರ ಸಾಹಿತ್ಯದಲ್ಲಿ ಬದುಕಿನ ಸತ್ಯಗಳಿವೆ. ಆಧುನಿಕತೆಯ ವಾಸ್ತವಿದ ಕಥೆಗಳಿವೆ’ ಎಂದರು.</p>.<p>ರಂಗಕರ್ಮಿ ಝಾಕಿರ್ ನದಾಫ್ `ಎಳೆಬಾಳೆ ಸುಳಿನಾನವ್ವ' ಕೃತಿ ಕುರಿತು ಮಾತನಾಡಿ, ಮಕ್ಕಳ ನಾಟಕ ಬರೆಯುವುದು ಪ್ರಯಾಸದಾಯಕ. ಮಕ್ಕಳ ಮನಸ್ಥಿತಿ, ಭಾವನೆ ಅರಿತು ನಾಟಕ ರಚಿಸಬೇಕಾಗುತ್ತದೆ. ಬಾಲ್ಯವಿವಾಹಂಥ ಸಾಮಾಜಿಕ ಅನಿಷ್ಟಗಳ ಕುರಿತು ನಾಟಕ ರಚಿಸಿ ಸಮಾಜ ಪರಿವರ್ತನೆಗೆ ಪ್ರಯತ್ನಿಸಿದ್ದಾರೆ’ ಎಂದು ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಧ್ಯಕ್ಷತೆ ವಹಿಸಿದ್ದರು. ರಂಗಕರ್ಮಿ ಸಿದ್ಧರಾಮ ಹಿಪ್ಪರಗಿ, ವೈ.ಜಿ.ಭಗವತಿ, ಶ್ರೀಧರ ಗಸ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>