<p><strong>ಹುಬ್ಬಳ್ಳಿ</strong>: 'ಬೇಡ ಜಂಗಮ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಮೀಸಲಾತಿ ಸೌಲಭ್ಯ ಸರ್ಕಾರ ಕಲ್ಪಿಸಬೇಕು. ಹಾಗೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಬೇಕು' ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಆಗ್ರಹಿಸಿದರು.</p>.<p>ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಇಲ್ಲಿನ ಮೂರುಸಾವಿರ ಮಠದ ಸಭಾಭವನದಲ್ಲಿ ವಿವಿಧ ಮಠಾಧೀಶರೊಂದಿಗೆ ಸಭೆ ನಡೆಸಿ, ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.</p>.<p>'ರಾಜ್ಯದ ಎಲ್ಲ ಜಿಲ್ಲೆಗಳ ಜಂಗಮ ಸಮುದಾಯ ಮಠಾಧೀಶರ ಜೊತೆ ಇಂದು ಸಭೆ ನಡೆಸಿ ಚರ್ಚಿಸಿದ್ದೇವೆ. ನಾವೇ ಜಂಗಮರು, ನಾವೇ ಬೇಡ ಜಂಗಮರು. ನಮ್ಮಲ್ಲಿ ಯಾವುದೇ ಬೇಧವಿಲ್ಲ. ಈ ಹಿನ್ನೆಲೆಯಲ್ಲಿ ಸಂವಿಧಾನದಲ್ಲಿ ನೀಡಿರುವ ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯ ನ್ಯಾಯಯುತವಾಗಿ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮುದಾಯದವರು ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ' ಎಂದು ಎಚ್ಚರಿಸಿದರು.</p>.<p>'ಎಂಟು-ಹತ್ತು ಮಂದಿ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣ ಪಡೆದು ಉದ್ಯೋಗದಲ್ಲಿದ್ದಾರೆ. ಆದರೆ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಕಾನೂನಾತ್ಮಕವಾಗಿ ಪಡೆದ ಹಕ್ಕನ್ನು ಹತ್ತಿಕ್ಕುವ ಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ' ಎಂದು ಆರೋಪಿಸಿದರು.</p>.<p>ಚಳಗೇರಿ ವೀರಸಂಗಮೇಶ್ವರ ಸ್ವಾಮೀಜಿ ಮಾತನಾಡಿ, 'ಸಂವಿಧಾನದಲ್ಲಿ ಉಲ್ಲೇಖಿಸಿರುವ 101 ಪರಿಶಿಷ್ಟರ ಪಟ್ಟಿಯಲ್ಲಿ ಬೇಡ ಜಂಗಮ ಹೆಸರು 19 ನೇ ಸ್ಥಾನದಲ್ಲಿದೆ. ಸಂವಿಧಾನ ರಚನೆಯಾಗಿ 73 ವರ್ಷ ಕಳೆದರೂ ದೊರೆಯಬೇಕಾದ ಸೌಲಭ್ಯ ಇನ್ನೂ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮಠಾಧೀಶರೆಲ್ಲ ಒಂದುಗೂಡಿ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಇದು ಯಾವುದೇ ಜಾತಿ, ಸಮುದಾಯದ ವಿರುದ್ಧದ ಹೋರಾಟವಲ್ಲ. ಸಂವಿಧಾನಬದ್ಧ ಹಕ್ಕಿಗೆ ಹೋರಾಟ' ಎಂದರು.</p>.<p><strong>'ಚುನಾವಣಾ ಕಣಕ್ಕೆ ಮಠಾಧೀಶರು'</strong></p>.<p>'ಸಮಾಜದ ಹಿತಕ್ಕಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಮಠಾಧೀಶರು ಆಯ್ದ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದ್ದಾರೆ' ಎಂದು ರುದ್ರಮುನಿ ಸ್ವಾಮೀಜಿ ಹೇಳಿದರು.</p>.<p>'ಬೇಡ ಜಂಗಮ ಸಮುದಾಯದ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ರಾಜಕೀಯಕ್ಕೆ ಮಠಾಧೀಶರು ಬಂದರೆ ಸಮಾಜದಲ್ಲಿ ಮತ್ತಷ್ಟು ಉತ್ತಮ ಕಾರ್ಯ ಮಾಡಲು ಸಾಧ್ಯ. ಆರ್ಥಿಕವಾಗಿ, ಆಡಳಿತಾತ್ಮಕವಾಗಿ ಶಕ್ತಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಆಯ್ದ ಕ್ಷೇತ್ರಗಳಲ್ಲಿ ಮಠಾಧೀಶರು ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ. ಯಾವ್ಯಾವ ಕ್ಷೇತ್ರ ಎನ್ನುವುದನ್ನು ಚುನಾವಣೆ ಸಂದರ್ಭದಲ್ಲಿ ತಿಳಿಸಲಾಗುವುದು' ಎಂದ ಸ್ವಾಮೀಜಿ', 'ನಾನು ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮೊದಲಿನಿಂದಲೂ ಇಚ್ಛಿಸಿದ್ದೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: 'ಬೇಡ ಜಂಗಮ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಮೀಸಲಾತಿ ಸೌಲಭ್ಯ ಸರ್ಕಾರ ಕಲ್ಪಿಸಬೇಕು. ಹಾಗೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಬೇಕು' ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಆಗ್ರಹಿಸಿದರು.</p>.<p>ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಇಲ್ಲಿನ ಮೂರುಸಾವಿರ ಮಠದ ಸಭಾಭವನದಲ್ಲಿ ವಿವಿಧ ಮಠಾಧೀಶರೊಂದಿಗೆ ಸಭೆ ನಡೆಸಿ, ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.</p>.<p>'ರಾಜ್ಯದ ಎಲ್ಲ ಜಿಲ್ಲೆಗಳ ಜಂಗಮ ಸಮುದಾಯ ಮಠಾಧೀಶರ ಜೊತೆ ಇಂದು ಸಭೆ ನಡೆಸಿ ಚರ್ಚಿಸಿದ್ದೇವೆ. ನಾವೇ ಜಂಗಮರು, ನಾವೇ ಬೇಡ ಜಂಗಮರು. ನಮ್ಮಲ್ಲಿ ಯಾವುದೇ ಬೇಧವಿಲ್ಲ. ಈ ಹಿನ್ನೆಲೆಯಲ್ಲಿ ಸಂವಿಧಾನದಲ್ಲಿ ನೀಡಿರುವ ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯ ನ್ಯಾಯಯುತವಾಗಿ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮುದಾಯದವರು ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ' ಎಂದು ಎಚ್ಚರಿಸಿದರು.</p>.<p>'ಎಂಟು-ಹತ್ತು ಮಂದಿ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣ ಪಡೆದು ಉದ್ಯೋಗದಲ್ಲಿದ್ದಾರೆ. ಆದರೆ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಕಾನೂನಾತ್ಮಕವಾಗಿ ಪಡೆದ ಹಕ್ಕನ್ನು ಹತ್ತಿಕ್ಕುವ ಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ' ಎಂದು ಆರೋಪಿಸಿದರು.</p>.<p>ಚಳಗೇರಿ ವೀರಸಂಗಮೇಶ್ವರ ಸ್ವಾಮೀಜಿ ಮಾತನಾಡಿ, 'ಸಂವಿಧಾನದಲ್ಲಿ ಉಲ್ಲೇಖಿಸಿರುವ 101 ಪರಿಶಿಷ್ಟರ ಪಟ್ಟಿಯಲ್ಲಿ ಬೇಡ ಜಂಗಮ ಹೆಸರು 19 ನೇ ಸ್ಥಾನದಲ್ಲಿದೆ. ಸಂವಿಧಾನ ರಚನೆಯಾಗಿ 73 ವರ್ಷ ಕಳೆದರೂ ದೊರೆಯಬೇಕಾದ ಸೌಲಭ್ಯ ಇನ್ನೂ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮಠಾಧೀಶರೆಲ್ಲ ಒಂದುಗೂಡಿ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಇದು ಯಾವುದೇ ಜಾತಿ, ಸಮುದಾಯದ ವಿರುದ್ಧದ ಹೋರಾಟವಲ್ಲ. ಸಂವಿಧಾನಬದ್ಧ ಹಕ್ಕಿಗೆ ಹೋರಾಟ' ಎಂದರು.</p>.<p><strong>'ಚುನಾವಣಾ ಕಣಕ್ಕೆ ಮಠಾಧೀಶರು'</strong></p>.<p>'ಸಮಾಜದ ಹಿತಕ್ಕಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಮಠಾಧೀಶರು ಆಯ್ದ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದ್ದಾರೆ' ಎಂದು ರುದ್ರಮುನಿ ಸ್ವಾಮೀಜಿ ಹೇಳಿದರು.</p>.<p>'ಬೇಡ ಜಂಗಮ ಸಮುದಾಯದ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ರಾಜಕೀಯಕ್ಕೆ ಮಠಾಧೀಶರು ಬಂದರೆ ಸಮಾಜದಲ್ಲಿ ಮತ್ತಷ್ಟು ಉತ್ತಮ ಕಾರ್ಯ ಮಾಡಲು ಸಾಧ್ಯ. ಆರ್ಥಿಕವಾಗಿ, ಆಡಳಿತಾತ್ಮಕವಾಗಿ ಶಕ್ತಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಆಯ್ದ ಕ್ಷೇತ್ರಗಳಲ್ಲಿ ಮಠಾಧೀಶರು ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ. ಯಾವ್ಯಾವ ಕ್ಷೇತ್ರ ಎನ್ನುವುದನ್ನು ಚುನಾವಣೆ ಸಂದರ್ಭದಲ್ಲಿ ತಿಳಿಸಲಾಗುವುದು' ಎಂದ ಸ್ವಾಮೀಜಿ', 'ನಾನು ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮೊದಲಿನಿಂದಲೂ ಇಚ್ಛಿಸಿದ್ದೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>