ವಿದ್ಯಾರ್ಥಿ ಇಮಾಮ್ ಜಾಫರ್ ಸಾಧಿಕ್, ಶಾಲೆ ಬಳಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಮಹಿಳಾ ಕಾನ್ಸ್ಟೆಬಲ್ ವಾಣಿ ಅಜಯ್ ದ್ಯಾವನೂರ, ವಿದ್ಯಾರ್ಥಿನಿ ತಾಯಿ ಭುವನೇಶ್ವರಿ ಕೆ, ಶಾಲೆ ಸಿಬ್ಬಂದಿ ಪ್ರಕಾಶ ಬಲರಾಮ ಮತ್ತು ಸುನೀತಾ ಜೋಸೆಫ್ ಗಾಯಗೊಂಡವರು. ಈ ಪೈಕಿ, ಹೆಚ್ಚಿನ ದಾಳಿಗೊಳಗಾದ ಭುವನೇಶ್ವರಿ ಮತ್ತು ವಾಣಿ ಅವರು ಕಿಮ್ಸ್ಗೆ ದಾಖಲಾಗಿದ್ದಾರೆ. ಇವರಲ್ಲಿ ಭುವನೇಶ್ವರಿ ಸ್ಥಿತಿ ಗಂಭೀರವಾಗಿದೆ.